July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

ಕಳೆಂಜ: ಕಳೆಂಜ, ಕುದ್ರಾಯ, ಬರೆಂಗಾಯ, ಕಾಯರ್ತಡ್ಕ, ಮಿಯ್ಯಾರು, ನೆರಿಯ ಹಾದೂ ಹೋಗುವ ಪಿಡಬ್ಲ್ಯೂ ರಸ್ತೆಯು ಕಳೆಂಜ ಗ್ರಾಮದ ಮರಕ್ಕಡ ಹೈಸ್ಕೂಲ್ ಸಮೀಪದಿಂದ ಮಿಯ್ಯಾರು ಹೊಸಂಗಡಿ ತನಕ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು ದೊಡ್ಡ ದೊಡ್ಡ ಹೊಂಡಗಳಿಂದ ಕೂಡಿದೆ.

ವಾಹನ ಸವಾರರಿಗೆ, ಶಾಲೆಗೆ ಹೋಗುವ ಶಾಲಾ ಮಕ್ಕಳಿಗೆ ಇನ್ನಿತರ ಕೆಲಸ ಕಾರ್ಯಗಳಿಗೆ ಹೋಗುವ ಗ್ರಾಮಸ್ಥರಿಗೆ ಸಮಸ್ಯೆ ಉಂಟಾಗಿದೆ. ಈಗಾಗಲೇ ಕೆಲವು ದ್ವಿಚಕ್ರ ವಾಹನಗಾರರು ರಸ್ತೆಯ ಹೊಂಡಕ್ಕೆ ಬಿದ್ದು ಗಾಯಗೊಂಡಿದ್ದಾರೆ,


ಕಳೆದ ಅವಧಿಯಲ್ಲಿ ಸರಕಾರದ ಅನುದಾನದಿಂದ ರೂ.7 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸಗೊಂಡಿದ್ದು ಆದರೆ ಈಗಿನ ಸರಕಾರವು ಸಾರ್ವಜನಿಕ ರಸ್ತೆ ಇನ್ನಿತರ ಕಾಮಗಾರಿಯ ಅನುದಾನವನ್ನು ಬಿಡುಗಡೆಗೊಳಿಸಲು ವಿಫಲವಾಗಿದೆ.

ಕೂಡಲೇ ಸರಕಾರ ತಡೆಹಿಡಿದ ಕಾಮಗಾರಿಗಳ ಅನುದಾನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಗ್ರಾಮಸ್ಥರು ಸಿದ್ದತೆ ನಡೆಸುತ್ತಿದ್ದಾರೆ ಎಂದು ಕಳೆಂಜ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಪ್ರಸನ್ನ ಎ.ಪಿ, ಹೋರಾಟಗಾರರಾದ ಉಮೇಶ್ ನಿಡ್ಡಾಜೆ, ರಾಜೇಶ್ ನಿಡ್ಡಾಜೆ, ನಿತಿನ್ ಅಶ್ವತ್ತಡಿ ಇವರುಗಳು ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!