25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

ಕಳೆಂಜ: ಕಳೆಂಜ, ಕುದ್ರಾಯ, ಬರೆಂಗಾಯ, ಕಾಯರ್ತಡ್ಕ, ಮಿಯ್ಯಾರು, ನೆರಿಯ ಹಾದೂ ಹೋಗುವ ಪಿಡಬ್ಲ್ಯೂ ರಸ್ತೆಯು ಕಳೆಂಜ ಗ್ರಾಮದ ಮರಕ್ಕಡ ಹೈಸ್ಕೂಲ್ ಸಮೀಪದಿಂದ ಮಿಯ್ಯಾರು ಹೊಸಂಗಡಿ ತನಕ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು ದೊಡ್ಡ ದೊಡ್ಡ ಹೊಂಡಗಳಿಂದ ಕೂಡಿದೆ.

ವಾಹನ ಸವಾರರಿಗೆ, ಶಾಲೆಗೆ ಹೋಗುವ ಶಾಲಾ ಮಕ್ಕಳಿಗೆ ಇನ್ನಿತರ ಕೆಲಸ ಕಾರ್ಯಗಳಿಗೆ ಹೋಗುವ ಗ್ರಾಮಸ್ಥರಿಗೆ ಸಮಸ್ಯೆ ಉಂಟಾಗಿದೆ. ಈಗಾಗಲೇ ಕೆಲವು ದ್ವಿಚಕ್ರ ವಾಹನಗಾರರು ರಸ್ತೆಯ ಹೊಂಡಕ್ಕೆ ಬಿದ್ದು ಗಾಯಗೊಂಡಿದ್ದಾರೆ,


ಕಳೆದ ಅವಧಿಯಲ್ಲಿ ಸರಕಾರದ ಅನುದಾನದಿಂದ ರೂ.7 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸಗೊಂಡಿದ್ದು ಆದರೆ ಈಗಿನ ಸರಕಾರವು ಸಾರ್ವಜನಿಕ ರಸ್ತೆ ಇನ್ನಿತರ ಕಾಮಗಾರಿಯ ಅನುದಾನವನ್ನು ಬಿಡುಗಡೆಗೊಳಿಸಲು ವಿಫಲವಾಗಿದೆ.

ಕೂಡಲೇ ಸರಕಾರ ತಡೆಹಿಡಿದ ಕಾಮಗಾರಿಗಳ ಅನುದಾನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಗ್ರಾಮಸ್ಥರು ಸಿದ್ದತೆ ನಡೆಸುತ್ತಿದ್ದಾರೆ ಎಂದು ಕಳೆಂಜ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಪ್ರಸನ್ನ ಎ.ಪಿ, ಹೋರಾಟಗಾರರಾದ ಉಮೇಶ್ ನಿಡ್ಡಾಜೆ, ರಾಜೇಶ್ ನಿಡ್ಡಾಜೆ, ನಿತಿನ್ ಅಶ್ವತ್ತಡಿ ಇವರುಗಳು ತಿಳಿಸಿರುತ್ತಾರೆ.

Related posts

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya
error: Content is protected !!