22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರ ಕಲ್ಪನೆಯ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ ಬೆಳ್ತಂಗಡಿ ಮಂಜುನಾಥ ಸಭಾಭವನದ ಪಿನಾಕಿ ಹಾಲ್ ನಲ್ಲಿ ಅ.3 ರಂದು ನಡೆಯಿತು.


ಕಾರ್ಯಕ್ರಮ ವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಮಾತನಾಡಿ, ಇಡೀ ಭಾರತ ಒಂದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಡುವ ನಿಟ್ಡಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಕರ್ತವ್ಯಪಥದಲ್ಲಿ ನಿರ್ಮಿಸಲು ಉದ್ಧೇಶಿಸಿರುವ ಯೋಧರ ಉದ್ಯಾನಕ್ಕೆ ದೇಶದ ಎಲ್ಲಾ ಧಾರ್ಮಿಕ ಕ್ಷೇತ್ರ, ಯೋಧರ ಮನೆಯ ಮಣ್ಣು ಸಂಗ್ರಹಿಸಿ, ಸಮರ್ಪಿಸುವ ಮೂಲಕ ನಮಗೂ ಸಂತೋಷದ ಭಾವನೆ ಉಂಟಾಗಿದೆ ಎಂದರು.


ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ, ನಮ್ಮ ದೇಶ ನಮ್ಮ ಮಣ್ಣು ಕಾರ್ಯಕ್ರಮದ ಜಿಲ್ಲಾ ಸಹಸಂಚಾಲಕ ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.
ಮಂಡಲ ಉಪಾಧ್ಯಕ್ಷ ಸೀತಾರಮ ಬಿ.ಎಸ್. ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ವಂದೇಮಾತರಂ ಹಾಡಿದರು.
ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ತಂದ ಮಣ್ಣುಗಳನ್ನು ಪ್ರಮುಖರು ಸಮರ್ಪಿಸಿದರು.

Related posts

ಮುಡಾ ಹಗರಣ: ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya
error: Content is protected !!