September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರ ಕಲ್ಪನೆಯ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ ಬೆಳ್ತಂಗಡಿ ಮಂಜುನಾಥ ಸಭಾಭವನದ ಪಿನಾಕಿ ಹಾಲ್ ನಲ್ಲಿ ಅ.3 ರಂದು ನಡೆಯಿತು.


ಕಾರ್ಯಕ್ರಮ ವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಮಾತನಾಡಿ, ಇಡೀ ಭಾರತ ಒಂದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಡುವ ನಿಟ್ಡಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಕರ್ತವ್ಯಪಥದಲ್ಲಿ ನಿರ್ಮಿಸಲು ಉದ್ಧೇಶಿಸಿರುವ ಯೋಧರ ಉದ್ಯಾನಕ್ಕೆ ದೇಶದ ಎಲ್ಲಾ ಧಾರ್ಮಿಕ ಕ್ಷೇತ್ರ, ಯೋಧರ ಮನೆಯ ಮಣ್ಣು ಸಂಗ್ರಹಿಸಿ, ಸಮರ್ಪಿಸುವ ಮೂಲಕ ನಮಗೂ ಸಂತೋಷದ ಭಾವನೆ ಉಂಟಾಗಿದೆ ಎಂದರು.


ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ, ನಮ್ಮ ದೇಶ ನಮ್ಮ ಮಣ್ಣು ಕಾರ್ಯಕ್ರಮದ ಜಿಲ್ಲಾ ಸಹಸಂಚಾಲಕ ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.
ಮಂಡಲ ಉಪಾಧ್ಯಕ್ಷ ಸೀತಾರಮ ಬಿ.ಎಸ್. ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ವಂದೇಮಾತರಂ ಹಾಡಿದರು.
ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ತಂದ ಮಣ್ಣುಗಳನ್ನು ಪ್ರಮುಖರು ಸಮರ್ಪಿಸಿದರು.

Related posts

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya

ಕಳಿಯ: ಪೇರಾಜೆ ನಿವಾಸಿ ನಾಗಮ್ಮ ನಿಧನ

Suddi Udaya

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!