25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

ಬೆಳ್ತಂಗಡಿ : ತಾಲೂಕು ಸಮಿತಿ ಬಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಅ.03ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿಯನ್ನು ಸಲ್ಲಿಸಿದರು.


ಪ್ರತಿಭಟನೆಯಲ್ಲಿ ಮಾತನಾಡಿದ ಭಾರತೀಯ ಮಜ್ದೂರ್ ಸಂಘದ ಜಯರಾಜ್ ಸಾಲಿಯಾನ್ 2021-22ನೇ ಸಾಲಿನಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಬಂದಿರುವುದಿಲ್ಲ, ನೂತನವಾಗಿ ಆಯ್ಕೆಯಾದ ಕರ್ನಾಟಕ ಸರ್ಕಾರದ ಕಾರ್ಮಿಕ ಮಂತ್ರಿ ಸಂತೋಷ್ ಲಾಡ್ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದರೆ, ವೃದ್ಧಾಪ್ಯಾ ಪಿಂಚಣಿ ಹಾಗೂ ಸ್ಕಾಲರ್ ಶಿಪ್ ನಲ್ಲಿ ಭಾರಿ ಪ್ರಮಾಣದ ಕಡಿತ ಮಾಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ ಎಂದರು.

ಈ ಸಂದರ್ಭದಲ್ಲಿ ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್, ಗಣೇಶ್, ಉದಯ್ ಕುಮಾರ್ ವಕೀಲರು, ಸಂತಪ್ಪ, ಪದಾಧಿಕಾರಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Related posts

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya
error: Content is protected !!