July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

ಕಳೆಂಜ: ಕಳೆಂಜ, ಕುದ್ರಾಯ, ಬರೆಂಗಾಯ, ಕಾಯರ್ತಡ್ಕ, ಮಿಯ್ಯಾರು, ನೆರಿಯ ಹಾದೂ ಹೋಗುವ ಪಿಡಬ್ಲ್ಯೂ ರಸ್ತೆಯು ಕಳೆಂಜ ಗ್ರಾಮದ ಮರಕ್ಕಡ ಹೈಸ್ಕೂಲ್ ಸಮೀಪದಿಂದ ಮಿಯ್ಯಾರು ಹೊಸಂಗಡಿ ತನಕ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು ದೊಡ್ಡ ದೊಡ್ಡ ಹೊಂಡಗಳಿಂದ ಕೂಡಿದೆ.

ವಾಹನ ಸವಾರರಿಗೆ, ಶಾಲೆಗೆ ಹೋಗುವ ಶಾಲಾ ಮಕ್ಕಳಿಗೆ ಇನ್ನಿತರ ಕೆಲಸ ಕಾರ್ಯಗಳಿಗೆ ಹೋಗುವ ಗ್ರಾಮಸ್ಥರಿಗೆ ಸಮಸ್ಯೆ ಉಂಟಾಗಿದೆ. ಈಗಾಗಲೇ ಕೆಲವು ದ್ವಿಚಕ್ರ ವಾಹನಗಾರರು ರಸ್ತೆಯ ಹೊಂಡಕ್ಕೆ ಬಿದ್ದು ಗಾಯಗೊಂಡಿದ್ದಾರೆ,


ಕಳೆದ ಅವಧಿಯಲ್ಲಿ ಸರಕಾರದ ಅನುದಾನದಿಂದ ರೂ.7 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸಗೊಂಡಿದ್ದು ಆದರೆ ಈಗಿನ ಸರಕಾರವು ಸಾರ್ವಜನಿಕ ರಸ್ತೆ ಇನ್ನಿತರ ಕಾಮಗಾರಿಯ ಅನುದಾನವನ್ನು ಬಿಡುಗಡೆಗೊಳಿಸಲು ವಿಫಲವಾಗಿದೆ.

ಕೂಡಲೇ ಸರಕಾರ ತಡೆಹಿಡಿದ ಕಾಮಗಾರಿಗಳ ಅನುದಾನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಗ್ರಾಮಸ್ಥರು ಸಿದ್ದತೆ ನಡೆಸುತ್ತಿದ್ದಾರೆ ಎಂದು ಕಳೆಂಜ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಪ್ರಸನ್ನ ಎ.ಪಿ, ಹೋರಾಟಗಾರರಾದ ಉಮೇಶ್ ನಿಡ್ಡಾಜೆ, ರಾಜೇಶ್ ನಿಡ್ಡಾಜೆ, ನಿತಿನ್ ಅಶ್ವತ್ತಡಿ ಇವರುಗಳು ತಿಳಿಸಿರುತ್ತಾರೆ.

Related posts

ಮಡಂತ್ಯಾರು ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ: ಶೇ.12 ಡಿವಿಡೆಂಟ್ ಘೋಷಣೆ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya
error: Content is protected !!