25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

ಕಳೆಂಜ: ಕಳೆಂಜ, ಕುದ್ರಾಯ, ಬರೆಂಗಾಯ, ಕಾಯರ್ತಡ್ಕ, ಮಿಯ್ಯಾರು, ನೆರಿಯ ಹಾದೂ ಹೋಗುವ ಪಿಡಬ್ಲ್ಯೂ ರಸ್ತೆಯು ಕಳೆಂಜ ಗ್ರಾಮದ ಮರಕ್ಕಡ ಹೈಸ್ಕೂಲ್ ಸಮೀಪದಿಂದ ಮಿಯ್ಯಾರು ಹೊಸಂಗಡಿ ತನಕ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು ದೊಡ್ಡ ದೊಡ್ಡ ಹೊಂಡಗಳಿಂದ ಕೂಡಿದೆ.

ವಾಹನ ಸವಾರರಿಗೆ, ಶಾಲೆಗೆ ಹೋಗುವ ಶಾಲಾ ಮಕ್ಕಳಿಗೆ ಇನ್ನಿತರ ಕೆಲಸ ಕಾರ್ಯಗಳಿಗೆ ಹೋಗುವ ಗ್ರಾಮಸ್ಥರಿಗೆ ಸಮಸ್ಯೆ ಉಂಟಾಗಿದೆ. ಈಗಾಗಲೇ ಕೆಲವು ದ್ವಿಚಕ್ರ ವಾಹನಗಾರರು ರಸ್ತೆಯ ಹೊಂಡಕ್ಕೆ ಬಿದ್ದು ಗಾಯಗೊಂಡಿದ್ದಾರೆ,


ಕಳೆದ ಅವಧಿಯಲ್ಲಿ ಸರಕಾರದ ಅನುದಾನದಿಂದ ರೂ.7 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸಗೊಂಡಿದ್ದು ಆದರೆ ಈಗಿನ ಸರಕಾರವು ಸಾರ್ವಜನಿಕ ರಸ್ತೆ ಇನ್ನಿತರ ಕಾಮಗಾರಿಯ ಅನುದಾನವನ್ನು ಬಿಡುಗಡೆಗೊಳಿಸಲು ವಿಫಲವಾಗಿದೆ.

ಕೂಡಲೇ ಸರಕಾರ ತಡೆಹಿಡಿದ ಕಾಮಗಾರಿಗಳ ಅನುದಾನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಗ್ರಾಮಸ್ಥರು ಸಿದ್ದತೆ ನಡೆಸುತ್ತಿದ್ದಾರೆ ಎಂದು ಕಳೆಂಜ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಪ್ರಸನ್ನ ಎ.ಪಿ, ಹೋರಾಟಗಾರರಾದ ಉಮೇಶ್ ನಿಡ್ಡಾಜೆ, ರಾಜೇಶ್ ನಿಡ್ಡಾಜೆ, ನಿತಿನ್ ಅಶ್ವತ್ತಡಿ ಇವರುಗಳು ತಿಳಿಸಿರುತ್ತಾರೆ.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

Suddi Udaya
error: Content is protected !!