25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಗೇರುಕಟ್ಟೆ : ಕಳಿಯ ಗ್ರಾಮದ ಫ್ರೆಂಡ್ಸ್ ರೇಷ್ಮೆ ರೋಡ್ ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ತಾಲೂಕು ಮಟ್ಟದ ಸ್ಟಿಲ್ ಮಾದರಿಯ ವಾಲಿಬಾಲ್ ಅ.1 ರಂದು ರೇಷ್ಮೆ ರೋಡ್ ಕ್ರೀಡಾಂಗಣದಲ್ಲಿ ನಡೆಯಿತು.
ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್. ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ, ಶುಭ ಹಾರಿಸಿದರು. ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ವಾಲಿಬಾಲ್ ಆಟಗಾರ ತುಕಾರಾಮ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.


ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹಾಗೂ ಕಳಿಯ ಗ್ರಾ.ಪಂ.ಸದಸ್ಯ ಸುಧಾಕರ ಮಜಲು, ಕಳಿಯ ಗ್ರಾ.ಪಂ.ಸದಸ್ಯ ಯಶೋಧರ ಶೆಟ್ಟಿ ಕೊರಂಜ ,ವಾಲಿಬಾಲ್ ಹಿರಿಯ ಆಟಗಾರ ಎಮ್.ಎ.ಎಮ್.ಪಿಯೇಡ್ ಪದವಿಧರ ಸುರೇಶ್ ಕುಮಾರ್ ಆರ್.ಎನ್.ಗೇರುಕಟ್ಟೆ, ಕೊಂಕಣ್ ರೈಲ್ವೇ ಹೆಚ್.ಟಿ.ಟಿ.ಇ. ಅಧಿಕಾರಿ ಮಂಗಳೂರು, ಸತೀಶ್ ಕುಮಾರ್ ಆರ್.ಎನ್.ಗೇರುಕಟ್ಚೆ, ಭಾರತೀಯ ಭೂಸೇನೆ ನಿವೃತ್ತ ಯೋಧ ಸುಭ್ರಮಣಿ ,ಗೇರುಕಟ್ಟೆ ಜಿ.ಎ.ಸುಪಾರಿ ಟ್ರೇಡರ್ಸ್ ಮಾಲಕ ಮನ್ಸೂರ್, ಸುಲ್ಕೇರಿ ಶ್ರೀ ರಾಮ ಫ್ರೌಡಶಾಲಾ ಶಿಕ್ಷಕ ಸತೀಶ್ ಕುಮಾರ್ ಎನ್.ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ.ಘಟಕ ದಿನಕರ್, ಸುದೇಶ್ ಗೌಡ ರೇಷ್ಮೆರೋಡ್, ಹಿರಿಯ ಆಟಗಾರ ಅಶೋಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಲೂಕಿನ ಸುಮಾರು 24 ತಂಡದ ವಾಲಿಬಾಲ್ ಆಟಗಾರರು ಭಾಗವಹಿಸಿದರು. ಕಾರ್ಯಕ್ರಮ ಸಂಘಟಕರಾದ ಸುದೇಶ್,ಅಭಿ ಶೆಟ್ಟಿ, ಪ್ರತೀಕ್ ಹಾಗೂ ಪ್ರೇಂಡ್ಸ್ ರೇಷ್ಮೆರೋಡ್ ಮತ್ತು ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಪದಾಧಿಕಾರಿಗಳು ಉಪಸ್ಥಿತರಿದ್ದು,ಸಹಕರಿಸಿದರು.
ಕಾರ್ಯಕ್ರಮ ಸಂಘಟಕ ರಾಜೇಶ್ ನಾಯಕ್ ಸ್ವಾಗತಿಸಿದರು.

Related posts

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya
error: Content is protected !!