July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಗೇರುಕಟ್ಟೆ : ಕಳಿಯ ಗ್ರಾಮದ ಫ್ರೆಂಡ್ಸ್ ರೇಷ್ಮೆ ರೋಡ್ ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ತಾಲೂಕು ಮಟ್ಟದ ಸ್ಟಿಲ್ ಮಾದರಿಯ ವಾಲಿಬಾಲ್ ಅ.1 ರಂದು ರೇಷ್ಮೆ ರೋಡ್ ಕ್ರೀಡಾಂಗಣದಲ್ಲಿ ನಡೆಯಿತು.
ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್. ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ, ಶುಭ ಹಾರಿಸಿದರು. ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ವಾಲಿಬಾಲ್ ಆಟಗಾರ ತುಕಾರಾಮ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.


ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹಾಗೂ ಕಳಿಯ ಗ್ರಾ.ಪಂ.ಸದಸ್ಯ ಸುಧಾಕರ ಮಜಲು, ಕಳಿಯ ಗ್ರಾ.ಪಂ.ಸದಸ್ಯ ಯಶೋಧರ ಶೆಟ್ಟಿ ಕೊರಂಜ ,ವಾಲಿಬಾಲ್ ಹಿರಿಯ ಆಟಗಾರ ಎಮ್.ಎ.ಎಮ್.ಪಿಯೇಡ್ ಪದವಿಧರ ಸುರೇಶ್ ಕುಮಾರ್ ಆರ್.ಎನ್.ಗೇರುಕಟ್ಟೆ, ಕೊಂಕಣ್ ರೈಲ್ವೇ ಹೆಚ್.ಟಿ.ಟಿ.ಇ. ಅಧಿಕಾರಿ ಮಂಗಳೂರು, ಸತೀಶ್ ಕುಮಾರ್ ಆರ್.ಎನ್.ಗೇರುಕಟ್ಚೆ, ಭಾರತೀಯ ಭೂಸೇನೆ ನಿವೃತ್ತ ಯೋಧ ಸುಭ್ರಮಣಿ ,ಗೇರುಕಟ್ಟೆ ಜಿ.ಎ.ಸುಪಾರಿ ಟ್ರೇಡರ್ಸ್ ಮಾಲಕ ಮನ್ಸೂರ್, ಸುಲ್ಕೇರಿ ಶ್ರೀ ರಾಮ ಫ್ರೌಡಶಾಲಾ ಶಿಕ್ಷಕ ಸತೀಶ್ ಕುಮಾರ್ ಎನ್.ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ.ಘಟಕ ದಿನಕರ್, ಸುದೇಶ್ ಗೌಡ ರೇಷ್ಮೆರೋಡ್, ಹಿರಿಯ ಆಟಗಾರ ಅಶೋಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಲೂಕಿನ ಸುಮಾರು 24 ತಂಡದ ವಾಲಿಬಾಲ್ ಆಟಗಾರರು ಭಾಗವಹಿಸಿದರು. ಕಾರ್ಯಕ್ರಮ ಸಂಘಟಕರಾದ ಸುದೇಶ್,ಅಭಿ ಶೆಟ್ಟಿ, ಪ್ರತೀಕ್ ಹಾಗೂ ಪ್ರೇಂಡ್ಸ್ ರೇಷ್ಮೆರೋಡ್ ಮತ್ತು ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಪದಾಧಿಕಾರಿಗಳು ಉಪಸ್ಥಿತರಿದ್ದು,ಸಹಕರಿಸಿದರು.
ಕಾರ್ಯಕ್ರಮ ಸಂಘಟಕ ರಾಜೇಶ್ ನಾಯಕ್ ಸ್ವಾಗತಿಸಿದರು.

Related posts

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಸುರತ್ಕಲ್: ಶ್ರೀನಿವಾಸ ಆಸ್ಪತ್ರೆಯಲ್ಲಿ ಪತ್ರಕರ್ತರಿಗೆ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya
error: Content is protected !!