23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

ಬೆಳ್ತಂಗಡಿ: ಎಚ್. ಟಿ. ಲೈನ್ ನ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ರಬ್ಬರ್ ಟ್ಯಾಪಿಂಗ್ ಗೆ ತೆರಳುತ್ತಿದ್ದ ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದೆ.
ಕಲ್ಮಂಜ ಗ್ರಾಮದ ಕುಡೆಂಚಿ-ಮೂಲಾರು ರಸ್ತೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.
ಬೆಳಗ್ಗೆ 6ಗಂಟೆಗೆ ಟ್ಯಾಪಿಂಗ್ ಗೆ ತೆರಳುತ್ತಿದ್ದ ಸ್ಥಳೀಯ ದಿನೇಶ್ ನಾಯ್ಕ್ ಎಂಬವರು ಇದನ್ನು ಗಮನಿಸಿ ತಕ್ಷ ಣ ಮೆಸ್ಕಾಂಗೆ ಮಾಹಿತಿ ನೀಡಿ, ಲೈನ್ ಆಪ್ ಮಾಡಲು ತಿಳಿಸಿದರು.
ತಂತಿ ತುಂಡಾಗಿ, ವಿದ್ಯುತ್ ಪ್ರವಹಿಸುತ್ತದ್ದ ಕಾರಣ ಈ ರಸ್ತೆಯಲ್ಲಿ ಬೆಳಿಗ್ಗೆ ಹಾಲಿನ ಡಿಪೋ, ಶಾಲೆ, ಕೆಲಸಕ್ಕೆ ತೆರಳುವ ಮಂದಿಗೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸ್ಥಳೀಯರ ಮಾಹಿತಿ ಹಾಗೂ ಮೆಸ್ಕಾಂನ ತುರ್ತು ಸ್ಪಂದನೆಯಿಂದ ಅಪಾಯ ತಪ್ಪಿದೆ.

Related posts

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya
error: Content is protected !!