25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಅಕ್ಟೋಬರ್ 6 ಮತ್ತು 7 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಎಂದು ಶಾಸಕ ಹರೀಶ್ ಪೂಂಜರವರು ಹೇಳಿದರು.

ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 204 ಕ್ಕೂ ಮಿಕ್ಕಿ ವಿವಿಧ ಕಂಪೆನಿಗಳು ಭಾಗವಹಿಸುತ್ತಿದ್ದು, ಮೇಳದಲ್ಲಿ ಭಾಗವಹಿಸುವ ಸಾವಿರಾರು‌ ಮಂದಿಗೆ ಉದ್ಯೋಗ ದೊರೆಯಲಿದೆ. ಬೆಳ್ತಂಗಡಿಯ ಗ್ರಾಮೀಣ ಭಾಗದ ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಇದರಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು.

ಪದವಿ ಶಿಕ್ಷಣ, ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್ ಹಾಗೂ ಇನ್ನಿತರ ಪಧವೀದರರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಡಳಿತ ಟ್ರಸ್ಟಿ ವಿವೇಕ್ ಆಳ್ವ ಅವರು ತಿಳಿಸಿದರು .

ಈ ಸಂದರ್ಭದಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ವಿಶೇಷವಾಗಿ ಅಕ್ಟೋಬರ್ 6 ರಂದು ಬೆಳಿಗ್ಗೆ 7ಗಂಟೆಗೆ ಸರಿಯಾಗಿ ಆಳ್ವಾಸ್ ನಲ್ಲಿ ನಡೆಯುವ ಉದ್ಯೋಗ ಮೇಳಕ್ಕೆ ಶ್ರಮಿಕ ಕಚೇರಿಯ ಬಳಿಯಿಂದ ಉಚಿತ ಬಸ್ ವ್ಯವಸ್ಥೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಶ್ರಮಿಕ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಮೊ:9901212207

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya
error: Content is protected !!