September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಅಕ್ಟೋಬರ್ 6 ಮತ್ತು 7 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಎಂದು ಶಾಸಕ ಹರೀಶ್ ಪೂಂಜರವರು ಹೇಳಿದರು.

ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 204 ಕ್ಕೂ ಮಿಕ್ಕಿ ವಿವಿಧ ಕಂಪೆನಿಗಳು ಭಾಗವಹಿಸುತ್ತಿದ್ದು, ಮೇಳದಲ್ಲಿ ಭಾಗವಹಿಸುವ ಸಾವಿರಾರು‌ ಮಂದಿಗೆ ಉದ್ಯೋಗ ದೊರೆಯಲಿದೆ. ಬೆಳ್ತಂಗಡಿಯ ಗ್ರಾಮೀಣ ಭಾಗದ ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಇದರಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು.

ಪದವಿ ಶಿಕ್ಷಣ, ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್ ಹಾಗೂ ಇನ್ನಿತರ ಪಧವೀದರರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಡಳಿತ ಟ್ರಸ್ಟಿ ವಿವೇಕ್ ಆಳ್ವ ಅವರು ತಿಳಿಸಿದರು .

ಈ ಸಂದರ್ಭದಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ವಿಶೇಷವಾಗಿ ಅಕ್ಟೋಬರ್ 6 ರಂದು ಬೆಳಿಗ್ಗೆ 7ಗಂಟೆಗೆ ಸರಿಯಾಗಿ ಆಳ್ವಾಸ್ ನಲ್ಲಿ ನಡೆಯುವ ಉದ್ಯೋಗ ಮೇಳಕ್ಕೆ ಶ್ರಮಿಕ ಕಚೇರಿಯ ಬಳಿಯಿಂದ ಉಚಿತ ಬಸ್ ವ್ಯವಸ್ಥೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಶ್ರಮಿಕ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಮೊ:9901212207

Related posts

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya
error: Content is protected !!