24.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.


ಮಿತ್ತಬಾಗಿಲು: ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷರಾದ ಎಸ್. ವಿನಯಚಂದ್ರ ರವರ ಅಧ್ಯಕ್ಷತೆಯಲ್ಲಿ ಕೊಲ್ಲಿ ದುರ್ಗಾ ದೇವಿ ಕಲಾ ಮಂದಿರದಲ್ಲಿ ನಡೆಯಿತು.
2022-23 ನೇ ಸಾಲಿನಲ್ಲಿ9.6 ಕೋಟಿ ವ್ಯವಹಾರವನ್ನು ಮಾಡಿ2.8 ಲಕ್ಷ ನಿವ್ವಳ ಲಾಭ ಗಳಿಸಿರುತ್ತದೆ. ಹಾಲು ಉತ್ಪಾದಕರಿಗೆ 65% ಬೋನಸ್ಸು ಮತ್ತು ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆಯನ್ನು ಮಾಡಲಾಯಿತು. ಸಂಘವು ನೂತನ ಕಟ್ಟಡವನ್ನು ನಿರ್ಮಿಸಿ ಬಲ್ಕ್ ಮಿಲ್ಕ್ ಕೂಲರ್ (ಬಿಎಂಸಿ) ನ್ನು ಅಳವಡಿಸಿರುತ್ತದೆ. ಗುಣಮಟ್ಟದ ಹಾಲು, ಶುದ್ಧವಾದ ಹಾಲು, ಉತ್ತಮ ದರವನ್ನು ನೀಡಲು ಸಹಕಾರವಾಗಿರುತ್ತದೆ.

ಸದಸ್ಯರೆಲ್ಲರೂ ಕೃಷಿಗೆ ಪೂರಕವಾಗಿ ಹೈನುಗಾರಿಕೆಯನ್ನು ಮಾಡಿ ಹೆಚ್ಚು ಹಾಲು ಉತ್ಪಾದಿಸಿ ಸಂಘಕ್ಕೆ ಪೂರೈಸಿ ತನ್ನ ಆರ್ಥಿಕತೆಯನ್ನು ಬಲಪಡಿಸಬೇಕೆಂದು ಸಭಾಧ್ಯಕ್ಷರಾದ ವಿನಯಚಂದ್ರರವರು ಸದಸ್ಯರಿಗೆ ಸಲಹೆ ನೀಡಿದರು. ಸಂಘದ ಉಪಾಧ್ಯಕ್ಷರಾದ ಕೆ.ನೇಮಿರಾಜ ರವರು ಸಭೆಯು ನ್ನುದ್ದೇಶಿಸಿ ಮಾತನಾಡುತ್ತಾ ‘ಸಮಾಜದ ಉತ್ತಮ ನಡವಳಿಕೆಗಳಿಗೆ ಭಾರತ ಸಂವಿಧಾನದ ಆಶಯಗಳನ್ನು ವ್ಯಕ್ತಪಡಿಸುತ್ತಾ ಡಾ” ಬಿ.ಆರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಚಿಂತನೆ ಹಾಗೂ ವಿಚಾರಗಳನ್ನು ನಾವೆಲ್ಲರೂ ಕೂಡ ಮೈಗೂಡಿಸಿಕೊಳ್ಳಬೇಕಾಗಿದೆ ಎನ್ನುತ್ತಾ ಸಂಘಕ್ಕೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಅವರ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘವು ಜಿಲ್ಲಾ ಮಟ್ಟದ ಸಾಧನ ಪ್ರಶಸ್ತಿಯನ್ನು ಪಡೆದುಕೊಂಡಿರುವುದರ ಸಲುವಾಗಿ ಸದಸ್ಯರೆಲ್ಲರಿಗೂ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸಂಘದ ಮಾಜಿ ಅಧ್ಯಕ್ಷರಾದ ಎನ್ ವಿನಯಚಂದ್ರ ನಡುಬೈಲ್ ರವರು ನಿರೂಪಿಸಿದರು. ಉಪಾಧ್ಯಕ್ಷರಾದ ಕೆ.ನೇಮಿರಾಜ ರವರು ಧನ್ಯವಾದ ನೀಡಿದರು.

Related posts

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!