23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಪದವಿ ಪೂರ್ವ ಕಾಲೇಜು ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ ಮಾಡಲಾಯಿತು. 

ಪ್ರಾಂಶುಪಾಲರಾದ  ವಂ.ಡಾ| ಆಲ್ವಿನ್ ಸೆರಾವೋ ಮಹಾತ್ಮ ಗಾಂಧೀಯವರ ಚಿಂತನೆಗಳು ಇಂದಿಗೆ ಹೇಗೆ ಪ್ರಸ್ತುತವಾಗಿದೆ ಎಂಬುದನ್ನು ವಿವರಿಸಿದರು. ಈದ್ ಮಿಲಾದ್ ಆಚರಣೆ ಸಹೋದರತೆಯ ಪ್ರತೀಕವಾಗಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ ದಿನೇಶ್ ಬಿ ಕೆ, ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ರಿಚರ್ಡ್ ಮೊರಸ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಕೇಶವ್ ಶರ್ಮ ಹಾಗೂ ಕು.ಸಂಹಿತಾ ತುಳುಪುಳೆ  ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯಾದ ಕು.ಇಸ್ಮತ್ ಕಾರ್ಯಕ್ರಮವನ್ನು ನಿರೂಪಿಸಿದರು. ಅಹಮ್ಮದ್ ಬಾಷರ್ ಹಾಗೂ ತಂಡದವರು ಹಾಡಿನ ಮೂಲಕ ಈದ್ ಮಿಲಾದ್ ಸಂದೇಶವನ್ನು ಸಾರಿದರು.

Related posts

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya
error: Content is protected !!