26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಒಂದು ವಾರ ಕಾಲ ನಡೆಯುತ್ತಿರುವ 25ನೇ ವರ್ಷದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭ ಹಾಗೂ ಭಜನೋತ್ಸವ ಸಮಾವೇಶ ಅ.4 ರಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು

ಮುಖ್ಯ ಅತಿಥಿಗಳಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಮತ್ತು ಖ್ಯಾತ ಗಾಯಕ ಇಳೈಯರಾಜ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ರುಗಳಾದ ಕೆ. ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್ ಶುಭಾಶಂಸನೆ ಮಾಡಿದರು.


ಕಾಯ೯ಕ್ರಮದಲ್ಲಿ ಶ್ರೀರಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ತಮಿಳುನಾಡಿನ ಹುಲಿಯರೈ ಸಿದ್ದಪ್ಪ ಸ್ವಾಮಿ, ಶ್ರೀಮತಿ ಹೇಮಾವತಿ ಹೆಗ್ಗಡೆ, ಡಿ.ಹಷೇ೯ಂದ್ರ ಕುಮಾರ್, ಸುಪ್ರೀಯ ಹಷೇ೯ಂದ್ರ ಕುಮಾರ್, ಹಿರೆಮಂಗಳೂರು ಕಣ್ಣನ್ , ಭಜನಾ ಪರಿಷತ್ ಅಧ್ಯಕ್ಷ ಬಾಲಕೃಷ್ಣ ಪೂಂಜ ಮೊದಲಾದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಮೂರು ಸಾವಿರ ಮಠದ ಶ್ರೀಗಳಿಗೆ ಹಾಗೂ ಸಂಪನ್ಮೂಲ ವ್ಯಕ್ತಿಗಳನ್ನು ಗೌರವಿಸಲಾಯಿತು.
ಬೆಳಿಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುನ್ನೂರು ಭಜನಾ ತಂಡಗಳ ಐದು ಸಾವಿರ ಭಜನಾ ಪಟುಗಳಿಂದ ಶೋಭಯಾತ್ರೆ ಮತ್ತು ನೃತ್ಯ ಭಜನೆ ನಡೆಯಿತು.

ಶ್ರೀ ಧ.ಮಂ. ಭಜನಾ ಕಮ್ಮಟ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಕಮ್ಮಟ ಕಾಯ೯ದಶಿ೯ ಸುರೇಶ್ ಮೊಯಿಲಿ ವರದಿ ವಾಚಿಸಿದರು. ಶ್ರೀನಿವಾಸ್ ರಾವ್ ಮತ್ತು ಡಾ| ಐ ಶಶಿಕಾಂತ್ ಜೈನ್ ನಿರೂಪಿಸಿದರು. ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಪಿ.ಕೆ ಪುರುಷೋತ್ತಮ ಧನ್ಯವಾದವಿತ್ತರು.

Related posts

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya
error: Content is protected !!