37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

ಉಜಿರೆ : ಶ್ರೀ ಧ. ಮ. ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ ಅ.4 ರಂದು ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ ಕಾಲೇಜು ಮೈದಾನದಲ್ಲಿ ಅ.4 ರಂದು ನಡೆಯಿತು.

ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ನಿರ್ದೇಶಕ, ಜಿಲ್ಲಾ ಉತ್ತಮ ಶಿಕ್ಷಕ ಪುರಸ್ಕೃತ ಪ್ರಶಾಂತ್ ಪೂಜಾರಿ ಮರೋಡಿ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಎಸ್. ಡಿ. ಎಂ. ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಸಂತೋಷ ವಹಿಸಿದ್ದರು.

ಎಸ್.ಡಿ. ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್ ಹೆಚ್. ಪಾಲಿಟೆಕ್ನಿಕ್ ನ ಮೆನೇಜರ್ ಚಂದ್ರಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್, ಉಪನ್ಯಾಸಕರು, ವಿದ್ಯಾರ್ಥಿಗಳು, ವಿವಿಧ ಕಾಲೇಜಿನ ತಂಡಗಳು ಭಾಗವಹಿಸಿದ್ದರು.

ಇದೆ ಸಂದರ್ಭದಲ್ಲಿ ಪ್ರಶಾಂತ್ ಸುವರ್ಣರವರನ್ನು ಸನ್ಮಾನಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ನಿತಿನ್ ಜೈನ್ ಸ್ವಾಗತಿಸಿದರು. ಸಂಪತ್ ಜೈನ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!