25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅ.2 ರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದ್ದು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದಿಂದ ವ್ಯಾಪಾರ ಮಳಿಗೆಗಳಿಗೆ ಹಾಗೂ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಲಾಯಿತು.

ಕೆಲವು ವ್ಯಾಪಾರ ಕೇಂದ್ರಗಳಿಂದ ಪ್ಲಾಸ್ಟಿಕ್ ಅನ್ನು ವಶಪಡಿಸಲಾಯಿತು. ಸರಕಾರದ ಆದೇಶದಂತೆ NO GSR571(E) ರಂತೆ ಪ್ಲಾಸ್ಟಿಕ್ ನಿಷೇಧ ಹಾಗೂ ದಂಡನೆ ನಿಯಮದಂತೆ ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಏಕ ಬಳಕೆಯ ಪ್ಲಾಸ್ಟಿಕ್ ಅಂದರೆ 100 ಮೈಕ್ರೋನಿಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್, ಪಿಯುಸಿ ಬ್ಯಾನರ್ ಗಳು,ಪ್ಲಾಸ್ಟಿಕ್ ಸ್ಟಿಕರ್ ಗಳು, ಪ್ಲಾಸ್ಟಿಕ್ ಚಮಚ, ಪ್ಲಾಸ್ಟಿಕ್ ಲೋಟಗಳು, ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್ ಗಳು,ಪ್ಲಾಸ್ಟಿಕ್ ಐಸ್ ಕ್ರೀಮ್ ಸ್ಟಿಕ್ ಗಳು, ಅಲಂಕಾರಿಕಾಗಿ ಬಳಸುವ ಪಾಲಿಸ್ಟೇರಿಯನ್ ಥರ್ಮಕೋಲ್, ಬಲೂನ್ ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್ ಗಳು,ಇವುಗಳ ದಾಸ್ತಾನು ಮಾರಾಟ ಮತ್ತು ಬಳಕೆಯನ್ನು ನಿಷೇಧ ಮಾಡುವಂತೆ ಸೂಚನೆ ನೀಡಲಾಯಿತು.

Related posts

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya
error: Content is protected !!