25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

ಅಳದಂಗಡಿ:ವನ್ಯಜೀವಿ ವಲಯ ಅಳದಂಗಡಿ ಹಾಗೂ ಪ್ರಾದೇಶಿಕ ವಲಯ ವೇಣೂರು ಮತ್ತು ಗ್ರಾಮಸ್ಥರ ಸಹಕಾರದಿಂದ ಅಳದಂಗಡಿ ಕೆದ್ದು- ಶಿರ್ಲಾಲು ರಸ್ತೆ ಬದಿ ಸ್ವಚ್ಚತಾ ಕಾರ್ಯ ನಡೆಯಿತು.

ರಸ್ತೆಯ ಬದಿಯಲ್ಲಿ ತುಂಬಿಕೊಂಡಿದ್ದ ಪ್ಲಾಸ್ಡಿಕ್, ಮದ್ಯದ ಬಾಟಲಿ, ಇತರ ತ್ಯಾಜ್ಯವನ್ನು ತೆಗೆದು ಶುಚಿಗೊಳಿಸಲಾಯಿತು.

ಸರಕಾರವು ಸ್ವಚ್ಚತಾ ಕಾರ್ಯಕ್ಕೆ ಪ್ರೋತ್ಸಾಹ ನೀಡುತ್ತಿದ್ದರು. ರಸ್ತೆ ಬದಿ ತ್ಯಾಜ್ಯವನ್ನು ಎಸೆಯುವುದು, ಮದ್ಯದ ಬಾಟಲಿಗಳನ್ನು ಚೀಲದಲ್ಲಿ ತುಂಬಿಸಿ ರಸ್ತೆ ಬದಿ ಬಿಸಾಡುವುದು ಕಡಿಮೆಯಾಗಿಲ್ಲ. ಈ ರೀತಿ ಕಸಕಡ್ಡಿಗಳನ್ನು ಬಿಸಾಡಿ ಪರಿಸರವನ್ನು ಹಾಳು ಮಾಡುವವರ ವಿರುದ್ದ ಸ್ಥಳೀಯ ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಸ್ವಚ್ಚತಾ ಕಾರ್ಯದಲ್ಲಿ ವನ್ಯ ಜೀವಿ ಅಳದಂಗಡಿ ಉಪ ವಲಯದ ಉಪ ವಲಯಾರಣ್ಯಧಿಕಾರಿ ರಮೇಶ್ ನಾಯ್ಕ್, ಗಸ್ತು ಅರಣ್ಯ ಪಾಲಕರು ಮಾರುತಿ ,ನಾಗೇಶ್, ವೇಣೂರು ವಲಯದ ಅಳದಂಗಡಿ ಶಾಖೆಯ ಗಸ್ತು ಅರಣ್ಯ ಪಾಲಕ ಮಂಜುನಾಥ್,ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ,ಶಿರ್ಲಾಲು ಗ್ರಾ.ಪಂ ಸದಸ್ಯ ಮಾಧವ, ಅಳದಂಗಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹರೀಶ್ ಆಚಾರ್ಯ,ಜಯರಾಮ್ ಪ್ರಸಾದ್,ಮನೋಹರ್, ದೇವುದಾಸ್ ಆಲಡ್ಕ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya
error: Content is protected !!