24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಅ.08 ರಿಂದ 14 ರ ವರೆಗೆ ನಡೆಯಲಿದೆ.

ಅ.08 ರ ಮಧ್ಯಾಹ್ನ 2.30 ಘಂಟೆಗೆ ಪಡ್ಯಾರಬೆಟ್ಟದ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಧರ್ಮದರ್ಶಿ ಜೀವಂಧರ ಕುಮಾರ್ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು , ನಿವೃತ್ತ ಪ್ರಾಚಾರ್ಯ ಪ್ರೊ. ದಿನೇಶ್ ಚೌಟ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿಯವರು ಶುಭಾಶಂಸನೆ ಮಾಡಲಿದ್ದಾರೆ. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಶ್ರೀನಾಥ್ ಅವರು ಸ್ವಚ್ಛ ಪರಿಸರದ ಕರಪತ್ರವನ್ನು ಬಿಡುಗಡೆ ಮಾಡಲಿದ್ದಾರೆ.

ಅ. 14 ರಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್ . ಸತೀಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು , ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅತಿಥಿಗಳಾಗಿ ಆಗಮಿಸಲಿದ್ದಾರೆ.

ವಾರಗಳ ಕಾಲ ಶ್ರಮದಾನ, ಗ್ರಾಮ ಸಮೀಕ್ಷೆ , ಶೈಕ್ಷಣಿಕ ಕಾರ್ಯಕ್ರಮ , ಸಾಂಸ್ಕೃತಿಕ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಶಿಬಿರ ಸಮಿತಿಯ ಅಧ್ಯಕ್ಷ ವಿಕಾಸ್ ಜೈನ್ , ಪೆರಿಂಜೆ ಹಾಗೂ ಉಜಿರೆಯ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya
error: Content is protected !!