26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ. 4 ರಂದು ವಲಯ ಹದಿನೈದರ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಸಂತ ಜಾನರ ಶಾಲಾ ಸಭಾಂಗಣದಲ್ಲಿ ಭೇಟಿ ನೀಡಿದರು.

ಸಮಾರಂಭದಲ್ಲಿ ಘಟಕದ ಅಧಿಕೃತ ವೆಬ್ ಸೈಟ್ https://www.jcikokkadakapila.com ಹಾಗೂ ಆಂಡ್ರಾಯ್ಡ್ ಆ್ಯಪ್ ಲೋಕಾರ್ಪಣೆ ಮಾಡಿದರು.

ಅವರು ಮಾತನಾಡುತ್ತಾ ಗ್ರಾಮೀಣ ಪ್ರದೇಶದಲ್ಲಿ ಜೇಸಿ ಸಂಸ್ಥೆಯು ಉತ್ತಮ ಕಾರ್ಯಕ್ರಮ ಮೂಲಕ ಜನಸೇವೆ ಮಾಡುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಶಾಲಾಕ್ಷಿ, ವಿಲ್ಮಾ ಶ್ವೇತಾ ಸ್ಟ್ರೆಲ್ಲಾ, ಯು. ನರಸಿಂಹ ನಾಯಕ್, ಕೆ. ವಸಂತ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ವಲಯಾಧ್ಯಕ್ಷರು ಹಾಗೂ ಅವರ ಧರ್ಮಪತ್ನಿಯನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಕೌಕ್ರಾಡಿ ಸಂತ ಜಾನರ ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಪ್ರಕಾಶ್ ಬೊತೆಲ್ಲೋ ಜೇಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವರದಿ ವಾಚಿಸಿದರು. ಜೆಸಿಂತಾ ಡಿ ಸೋಜ ವಿಜೇತ ಮಕ್ಕಳ ವಿವರ ಓದಿದರು.


ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ ರಾವ್ ಹಾಗೂ ಗಣ್ಯರು ಉಪಸ್ಥಿತರಿದ್ದರು. ವಲಯಾಧ್ಯಕ್ಷರ ಆಪ್ತ ಕಾರ್ಯದರ್ಶಿ ಕಾರ್ತಿಕ್ ಬಿ. ಅವರು ಶುಭ ಹಾರೈಸಿದರು. ರಾಜಾರಾಮ, ಜಸ್ವಂತ್ ಪಿರೇರಾ, ಪ್ರಿಯಾ, ದೀಪಾ, ಜೋಯ್ ಬೊತೆಲ್ಲೋ ಅವರು ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ವಿಕ್ಟರ್ ವಂದಿಸಿದರು.

Related posts

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya
error: Content is protected !!