September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅ.2 ರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದ್ದು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದಿಂದ ವ್ಯಾಪಾರ ಮಳಿಗೆಗಳಿಗೆ ಹಾಗೂ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಲಾಯಿತು.

ಕೆಲವು ವ್ಯಾಪಾರ ಕೇಂದ್ರಗಳಿಂದ ಪ್ಲಾಸ್ಟಿಕ್ ಅನ್ನು ವಶಪಡಿಸಲಾಯಿತು. ಸರಕಾರದ ಆದೇಶದಂತೆ NO GSR571(E) ರಂತೆ ಪ್ಲಾಸ್ಟಿಕ್ ನಿಷೇಧ ಹಾಗೂ ದಂಡನೆ ನಿಯಮದಂತೆ ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಏಕ ಬಳಕೆಯ ಪ್ಲಾಸ್ಟಿಕ್ ಅಂದರೆ 100 ಮೈಕ್ರೋನಿಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್, ಪಿಯುಸಿ ಬ್ಯಾನರ್ ಗಳು,ಪ್ಲಾಸ್ಟಿಕ್ ಸ್ಟಿಕರ್ ಗಳು, ಪ್ಲಾಸ್ಟಿಕ್ ಚಮಚ, ಪ್ಲಾಸ್ಟಿಕ್ ಲೋಟಗಳು, ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್ ಗಳು,ಪ್ಲಾಸ್ಟಿಕ್ ಐಸ್ ಕ್ರೀಮ್ ಸ್ಟಿಕ್ ಗಳು, ಅಲಂಕಾರಿಕಾಗಿ ಬಳಸುವ ಪಾಲಿಸ್ಟೇರಿಯನ್ ಥರ್ಮಕೋಲ್, ಬಲೂನ್ ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್ ಗಳು,ಇವುಗಳ ದಾಸ್ತಾನು ಮಾರಾಟ ಮತ್ತು ಬಳಕೆಯನ್ನು ನಿಷೇಧ ಮಾಡುವಂತೆ ಸೂಚನೆ ನೀಡಲಾಯಿತು.

Related posts

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

Suddi Udaya
error: Content is protected !!