April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

ಅಳದಂಗಡಿ:ವನ್ಯಜೀವಿ ವಲಯ ಅಳದಂಗಡಿ ಹಾಗೂ ಪ್ರಾದೇಶಿಕ ವಲಯ ವೇಣೂರು ಮತ್ತು ಗ್ರಾಮಸ್ಥರ ಸಹಕಾರದಿಂದ ಅಳದಂಗಡಿ ಕೆದ್ದು- ಶಿರ್ಲಾಲು ರಸ್ತೆ ಬದಿ ಸ್ವಚ್ಚತಾ ಕಾರ್ಯ ನಡೆಯಿತು.

ರಸ್ತೆಯ ಬದಿಯಲ್ಲಿ ತುಂಬಿಕೊಂಡಿದ್ದ ಪ್ಲಾಸ್ಡಿಕ್, ಮದ್ಯದ ಬಾಟಲಿ, ಇತರ ತ್ಯಾಜ್ಯವನ್ನು ತೆಗೆದು ಶುಚಿಗೊಳಿಸಲಾಯಿತು.

ಸರಕಾರವು ಸ್ವಚ್ಚತಾ ಕಾರ್ಯಕ್ಕೆ ಪ್ರೋತ್ಸಾಹ ನೀಡುತ್ತಿದ್ದರು. ರಸ್ತೆ ಬದಿ ತ್ಯಾಜ್ಯವನ್ನು ಎಸೆಯುವುದು, ಮದ್ಯದ ಬಾಟಲಿಗಳನ್ನು ಚೀಲದಲ್ಲಿ ತುಂಬಿಸಿ ರಸ್ತೆ ಬದಿ ಬಿಸಾಡುವುದು ಕಡಿಮೆಯಾಗಿಲ್ಲ. ಈ ರೀತಿ ಕಸಕಡ್ಡಿಗಳನ್ನು ಬಿಸಾಡಿ ಪರಿಸರವನ್ನು ಹಾಳು ಮಾಡುವವರ ವಿರುದ್ದ ಸ್ಥಳೀಯ ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಸ್ವಚ್ಚತಾ ಕಾರ್ಯದಲ್ಲಿ ವನ್ಯ ಜೀವಿ ಅಳದಂಗಡಿ ಉಪ ವಲಯದ ಉಪ ವಲಯಾರಣ್ಯಧಿಕಾರಿ ರಮೇಶ್ ನಾಯ್ಕ್, ಗಸ್ತು ಅರಣ್ಯ ಪಾಲಕರು ಮಾರುತಿ ,ನಾಗೇಶ್, ವೇಣೂರು ವಲಯದ ಅಳದಂಗಡಿ ಶಾಖೆಯ ಗಸ್ತು ಅರಣ್ಯ ಪಾಲಕ ಮಂಜುನಾಥ್,ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ,ಶಿರ್ಲಾಲು ಗ್ರಾ.ಪಂ ಸದಸ್ಯ ಮಾಧವ, ಅಳದಂಗಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹರೀಶ್ ಆಚಾರ್ಯ,ಜಯರಾಮ್ ಪ್ರಸಾದ್,ಮನೋಹರ್, ದೇವುದಾಸ್ ಆಲಡ್ಕ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!