24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

ಅಳದಂಗಡಿ:ವನ್ಯಜೀವಿ ವಲಯ ಅಳದಂಗಡಿ ಹಾಗೂ ಪ್ರಾದೇಶಿಕ ವಲಯ ವೇಣೂರು ಮತ್ತು ಗ್ರಾಮಸ್ಥರ ಸಹಕಾರದಿಂದ ಅಳದಂಗಡಿ ಕೆದ್ದು- ಶಿರ್ಲಾಲು ರಸ್ತೆ ಬದಿ ಸ್ವಚ್ಚತಾ ಕಾರ್ಯ ನಡೆಯಿತು.

ರಸ್ತೆಯ ಬದಿಯಲ್ಲಿ ತುಂಬಿಕೊಂಡಿದ್ದ ಪ್ಲಾಸ್ಡಿಕ್, ಮದ್ಯದ ಬಾಟಲಿ, ಇತರ ತ್ಯಾಜ್ಯವನ್ನು ತೆಗೆದು ಶುಚಿಗೊಳಿಸಲಾಯಿತು.

ಸರಕಾರವು ಸ್ವಚ್ಚತಾ ಕಾರ್ಯಕ್ಕೆ ಪ್ರೋತ್ಸಾಹ ನೀಡುತ್ತಿದ್ದರು. ರಸ್ತೆ ಬದಿ ತ್ಯಾಜ್ಯವನ್ನು ಎಸೆಯುವುದು, ಮದ್ಯದ ಬಾಟಲಿಗಳನ್ನು ಚೀಲದಲ್ಲಿ ತುಂಬಿಸಿ ರಸ್ತೆ ಬದಿ ಬಿಸಾಡುವುದು ಕಡಿಮೆಯಾಗಿಲ್ಲ. ಈ ರೀತಿ ಕಸಕಡ್ಡಿಗಳನ್ನು ಬಿಸಾಡಿ ಪರಿಸರವನ್ನು ಹಾಳು ಮಾಡುವವರ ವಿರುದ್ದ ಸ್ಥಳೀಯ ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಸ್ವಚ್ಚತಾ ಕಾರ್ಯದಲ್ಲಿ ವನ್ಯ ಜೀವಿ ಅಳದಂಗಡಿ ಉಪ ವಲಯದ ಉಪ ವಲಯಾರಣ್ಯಧಿಕಾರಿ ರಮೇಶ್ ನಾಯ್ಕ್, ಗಸ್ತು ಅರಣ್ಯ ಪಾಲಕರು ಮಾರುತಿ ,ನಾಗೇಶ್, ವೇಣೂರು ವಲಯದ ಅಳದಂಗಡಿ ಶಾಖೆಯ ಗಸ್ತು ಅರಣ್ಯ ಪಾಲಕ ಮಂಜುನಾಥ್,ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ,ಶಿರ್ಲಾಲು ಗ್ರಾ.ಪಂ ಸದಸ್ಯ ಮಾಧವ, ಅಳದಂಗಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹರೀಶ್ ಆಚಾರ್ಯ,ಜಯರಾಮ್ ಪ್ರಸಾದ್,ಮನೋಹರ್, ದೇವುದಾಸ್ ಆಲಡ್ಕ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya
error: Content is protected !!