27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

ಬೆಳ್ತಂಗಡಿ: ಇತ್ತೀಚೆಗೆ ನಡೆದ ಗಾಂಧಿಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ, ಸುಳ್ಯದ ಅಮರಶ್ರೀಬಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ ‘ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮದಲ್ಲಿ ಪರಮಪೂಜ್ಯ ಡಾ| ವೀರೇಂದ್ರ ಹೆಗ್ಡೆಯವರು ಆಶೀರ್ವಾದದಿಂದ ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರು ಬಸವನಗುಡಿ ನಿವಾಸಿ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರಿಗೆ ಜಾಗೃತಿ ಅಣ್ಣ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮೂಲಕ ನಡೆಸಲ್ಪಡುವ ಸಮುದಾಯ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ವಿಶೇಷ ಸಾಧನೆ ಮಾಡಿರುತ್ತಾರೆ ಹಾಗೂ ಸ್ವ ಪ್ರೇರಣೆಯಿಂದ 100ಕ್ಕೂ ಹೆಚ್ಚು ಮಂದಿ ಮದ್ಯವ್ಯಸನಿಗಳ ಮನಃಪರಿವರ್ತನೆ ಮಾಡಿ ವಿವಿಧ ಕಡೆಗಳಲ್ಲಿ ನಡೆದ ಮದ್ಯವರ್ಜನ ಶಿಬಿರಗಳಿಗೆ ದಾಖಲಿಸಿರುತ್ತಾರೆ. ಈ ಮೂಲಕ ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾಗಿದ್ದಾರೆ. ಇವರ ವಿಶೇಷ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಜಾಗೃತಿ ಅಣ್ಣ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya
error: Content is protected !!