September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

ಬೆಳ್ತಂಗಡಿ: ಇತ್ತೀಚೆಗೆ ನಡೆದ ಗಾಂಧಿಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ, ಸುಳ್ಯದ ಅಮರಶ್ರೀಬಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ ‘ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮದಲ್ಲಿ ಪರಮಪೂಜ್ಯ ಡಾ| ವೀರೇಂದ್ರ ಹೆಗ್ಡೆಯವರು ಆಶೀರ್ವಾದದಿಂದ ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರು ಬಸವನಗುಡಿ ನಿವಾಸಿ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರಿಗೆ ಜಾಗೃತಿ ಅಣ್ಣ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮೂಲಕ ನಡೆಸಲ್ಪಡುವ ಸಮುದಾಯ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ವಿಶೇಷ ಸಾಧನೆ ಮಾಡಿರುತ್ತಾರೆ ಹಾಗೂ ಸ್ವ ಪ್ರೇರಣೆಯಿಂದ 100ಕ್ಕೂ ಹೆಚ್ಚು ಮಂದಿ ಮದ್ಯವ್ಯಸನಿಗಳ ಮನಃಪರಿವರ್ತನೆ ಮಾಡಿ ವಿವಿಧ ಕಡೆಗಳಲ್ಲಿ ನಡೆದ ಮದ್ಯವರ್ಜನ ಶಿಬಿರಗಳಿಗೆ ದಾಖಲಿಸಿರುತ್ತಾರೆ. ಈ ಮೂಲಕ ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾಗಿದ್ದಾರೆ. ಇವರ ವಿಶೇಷ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಜಾಗೃತಿ ಅಣ್ಣ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

Suddi Udaya

ಮುಂಡಾಜೆ ಯುವವಾಹಿನಿ ಸಂಚಲನಾ ಸಮಿತಿಯ ಪದಗ್ರಹಣ, ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಮಾವಿನಕಟ್ಟೆ ಮೋನಪ್ಪ ಶೆಟ್ಟಿ ನಿಧನ

Suddi Udaya
error: Content is protected !!