23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

ಬೆಳ್ತಂಗಡಿ: ಇತ್ತೀಚೆಗೆ ನಡೆದ ಗಾಂಧಿಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ, ಸುಳ್ಯದ ಅಮರಶ್ರೀಬಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ ‘ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮದಲ್ಲಿ ಪರಮಪೂಜ್ಯ ಡಾ| ವೀರೇಂದ್ರ ಹೆಗ್ಡೆಯವರು ಆಶೀರ್ವಾದದಿಂದ ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರು ಬಸವನಗುಡಿ ನಿವಾಸಿ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರಿಗೆ ಜಾಗೃತಿ ಅಣ್ಣ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮೂಲಕ ನಡೆಸಲ್ಪಡುವ ಸಮುದಾಯ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ವಿಶೇಷ ಸಾಧನೆ ಮಾಡಿರುತ್ತಾರೆ ಹಾಗೂ ಸ್ವ ಪ್ರೇರಣೆಯಿಂದ 100ಕ್ಕೂ ಹೆಚ್ಚು ಮಂದಿ ಮದ್ಯವ್ಯಸನಿಗಳ ಮನಃಪರಿವರ್ತನೆ ಮಾಡಿ ವಿವಿಧ ಕಡೆಗಳಲ್ಲಿ ನಡೆದ ಮದ್ಯವರ್ಜನ ಶಿಬಿರಗಳಿಗೆ ದಾಖಲಿಸಿರುತ್ತಾರೆ. ಈ ಮೂಲಕ ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾಗಿದ್ದಾರೆ. ಇವರ ವಿಶೇಷ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಜಾಗೃತಿ ಅಣ್ಣ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya
error: Content is protected !!