ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಯೋಗೋತ್ಸವವು ಹೆಚ್.ಡಿ ಕೋಟೆ ತಾಲೂಕಿನಾದ್ಯಾಂತ ಏಕಕಾಲದಲ್ಲಿ ಅನುಭವಿ ಯೋಗ ಶಿಕ್ಷಕರಿಂದ 80 ಕೇಂದ್ರಗಳಲ್ಲಿ 41ನೇ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರ ವಿದ್ಯಾರ್ಥಿಗಳಿಗಾಗಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನಾ ಸಮಾರಂಭವು ಅ.11 ರಂದು ಗುರುಭವನ ಹೆಚ್.ಡಿ ಕೋಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸರಗೂರು ಶ್ರೀ ಮಹದೇವಸ್ವಾಮಿ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಹೆಚ್ ಕೋಟೆ ತಹಶೀಲ್ದಾರರು ಸಣ್ಣರಾಮಪ್ಪ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಧ.ಗ್ರಾ.ಯೋ.ಪ್ರಾದೇಶಿಕ ನಿರ್ದೇಶಕ ಬಿ ಜಯರಾಮ ನೆಲ್ಲಿತ್ತಾಯ, ಹೆಚ್.ಡಿ ಕೋಟೆ ತಾಲೂಕು ಆರೋಗ್ಯಧಿಕಾರಿ ಟಿ ರವಿಕುಮಾರ್, ಹೆಚ್.ಡಿ ಕೋಟೆ ಆರಕ್ಷಕ ನಿರೀಕ್ಷಕ ಶಬ್ಬೀರ್ ಹುಸೇನ್, ಹೆಚ್.ಡಿ ಕೋಟೆ ಕ್ಷೇತ್ರ ಶಿಕ್ಷಣಧಿಕಾರಿ ಮಾರಯ್ಯ,ಹೆಚ್.ಡಿ ಕೋಟೆ ವಕೀಲರು ಎ.ಸಿ ರವಿ ಕುಮಾರ್ ಭಾಗವಹಿಸಲಿದ್ದಾರೆ.

Leave a Comment

error: Content is protected !!