23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ. 4 ರಂದು ವಲಯ ಹದಿನೈದರ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಸಂತ ಜಾನರ ಶಾಲಾ ಸಭಾಂಗಣದಲ್ಲಿ ಭೇಟಿ ನೀಡಿದರು.

ಸಮಾರಂಭದಲ್ಲಿ ಘಟಕದ ಅಧಿಕೃತ ವೆಬ್ ಸೈಟ್ https://www.jcikokkadakapila.com ಹಾಗೂ ಆಂಡ್ರಾಯ್ಡ್ ಆ್ಯಪ್ ಲೋಕಾರ್ಪಣೆ ಮಾಡಿದರು.

ಅವರು ಮಾತನಾಡುತ್ತಾ ಗ್ರಾಮೀಣ ಪ್ರದೇಶದಲ್ಲಿ ಜೇಸಿ ಸಂಸ್ಥೆಯು ಉತ್ತಮ ಕಾರ್ಯಕ್ರಮ ಮೂಲಕ ಜನಸೇವೆ ಮಾಡುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಶಾಲಾಕ್ಷಿ, ವಿಲ್ಮಾ ಶ್ವೇತಾ ಸ್ಟ್ರೆಲ್ಲಾ, ಯು. ನರಸಿಂಹ ನಾಯಕ್, ಕೆ. ವಸಂತ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ವಲಯಾಧ್ಯಕ್ಷರು ಹಾಗೂ ಅವರ ಧರ್ಮಪತ್ನಿಯನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಕೌಕ್ರಾಡಿ ಸಂತ ಜಾನರ ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಪ್ರಕಾಶ್ ಬೊತೆಲ್ಲೋ ಜೇಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವರದಿ ವಾಚಿಸಿದರು. ಜೆಸಿಂತಾ ಡಿ ಸೋಜ ವಿಜೇತ ಮಕ್ಕಳ ವಿವರ ಓದಿದರು.


ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ ರಾವ್ ಹಾಗೂ ಗಣ್ಯರು ಉಪಸ್ಥಿತರಿದ್ದರು. ವಲಯಾಧ್ಯಕ್ಷರ ಆಪ್ತ ಕಾರ್ಯದರ್ಶಿ ಕಾರ್ತಿಕ್ ಬಿ. ಅವರು ಶುಭ ಹಾರೈಸಿದರು. ರಾಜಾರಾಮ, ಜಸ್ವಂತ್ ಪಿರೇರಾ, ಪ್ರಿಯಾ, ದೀಪಾ, ಜೋಯ್ ಬೊತೆಲ್ಲೋ ಅವರು ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ವಿಕ್ಟರ್ ವಂದಿಸಿದರು.

Related posts

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!