April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

ಬೆಳ್ತಂಗಡಿ: ಇತ್ತೀಚೆಗೆ ನಡೆದ ಗಾಂಧಿಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ, ಸುಳ್ಯದ ಅಮರಶ್ರೀಬಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ ‘ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮದಲ್ಲಿ ಪರಮಪೂಜ್ಯ ಡಾ| ವೀರೇಂದ್ರ ಹೆಗ್ಡೆಯವರು ಆಶೀರ್ವಾದದಿಂದ ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರು ಬಸವನಗುಡಿ ನಿವಾಸಿ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರಿಗೆ ಜಾಗೃತಿ ಅಣ್ಣ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮೂಲಕ ನಡೆಸಲ್ಪಡುವ ಸಮುದಾಯ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ವಿಶೇಷ ಸಾಧನೆ ಮಾಡಿರುತ್ತಾರೆ ಹಾಗೂ ಸ್ವ ಪ್ರೇರಣೆಯಿಂದ 100ಕ್ಕೂ ಹೆಚ್ಚು ಮಂದಿ ಮದ್ಯವ್ಯಸನಿಗಳ ಮನಃಪರಿವರ್ತನೆ ಮಾಡಿ ವಿವಿಧ ಕಡೆಗಳಲ್ಲಿ ನಡೆದ ಮದ್ಯವರ್ಜನ ಶಿಬಿರಗಳಿಗೆ ದಾಖಲಿಸಿರುತ್ತಾರೆ. ಈ ಮೂಲಕ ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾಗಿದ್ದಾರೆ. ಇವರ ವಿಶೇಷ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಜಾಗೃತಿ ಅಣ್ಣ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya
error: Content is protected !!