23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

ಬೆಳ್ತಂಗಡಿ: ಇತ್ತೀಚೆಗೆ ನಡೆದ ಗಾಂಧಿಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ, ಸುಳ್ಯದ ಅಮರಶ್ರೀಬಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ ‘ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮದಲ್ಲಿ ಪರಮಪೂಜ್ಯ ಡಾ| ವೀರೇಂದ್ರ ಹೆಗ್ಡೆಯವರು ಆಶೀರ್ವಾದದಿಂದ ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರು ಬಸವನಗುಡಿ ನಿವಾಸಿ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರಿಗೆ ಜಾಗೃತಿ ಅಣ್ಣ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮೂಲಕ ನಡೆಸಲ್ಪಡುವ ಸಮುದಾಯ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ವಿಶೇಷ ಸಾಧನೆ ಮಾಡಿರುತ್ತಾರೆ ಹಾಗೂ ಸ್ವ ಪ್ರೇರಣೆಯಿಂದ 100ಕ್ಕೂ ಹೆಚ್ಚು ಮಂದಿ ಮದ್ಯವ್ಯಸನಿಗಳ ಮನಃಪರಿವರ್ತನೆ ಮಾಡಿ ವಿವಿಧ ಕಡೆಗಳಲ್ಲಿ ನಡೆದ ಮದ್ಯವರ್ಜನ ಶಿಬಿರಗಳಿಗೆ ದಾಖಲಿಸಿರುತ್ತಾರೆ. ಈ ಮೂಲಕ ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾಗಿದ್ದಾರೆ. ಇವರ ವಿಶೇಷ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಜಾಗೃತಿ ಅಣ್ಣ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya
error: Content is protected !!