22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

ಗುರುವಾಯನಕೆರೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ಸುನ್ನತ್ ಕೆರೆ – ಪೊಟ್ಟುಕೆರೆ (ಶಕ್ತಿ ನಗರ) ಸಂಪರ್ಕ ರಸ್ತೆ ದುರಸ್ಥಿಗೆ ಆಗ್ರಹಿಸಿ ಸುನ್ನತ್ ಕೆರೆ ಹನಫಿ ಮಸೀದಿ ಬಳಿಯಿಂದ ಕಾಲ್ನಡಿಗೆ ಜಾಥಾ ನಡೆಸಿ ನಂತರ ಸುನ್ನತ್ ಕೆರೆ ಜಂಕ್ಷನ್ ನಲ್ಲಿ ಪ್ರತಿಭಟನಾ ಸಭೆಯು ಅ. 6 ರಂದು ನಡೆಯಿತು.

ಹಲವಾರು ವರ್ಷಗಳಿಂದ ಈ ಸಂಪರ್ಕ ರಸ್ತೆಯು ಹದೆಗೆಟ್ಟು ದುರಸ್ಥಿ ಕಾಣದೆ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಸಂಬಂಧಪಟ್ಟ ವಿವಿಧ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ರಸ್ತೆ ಸರಿ ಪಡಿಸುವಂತೆ ಹಲವು ಭಾರೀ ಮನವಿಯನ್ನು ಸಲ್ಲಿಸಿದರು ಯಾವುದೇ ಪ್ರಯೋಜನವಾಗಲಿಲ್ಲ ಎಂದು ದೂರಿದರು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷ ನವಾಝ್ ಕಟ್ಟೆ ಮಾತನಾಡಿ ಇಷ್ಟು ದಿನ ನಮ್ಮ ಮನವಿಗಳನ್ನು ನಿರ್ಲಕ್ಷಿಸಿ ರಸ್ತೆ ದುರಸ್ಥಿ ಮಾಡದೆ ಇರುವುದರಿಂದ ಇಂದು ಸಾಂಕೇತಿಕವಾಗಿ ಈ ಪ್ರತಿಭಟನೆ ನಡೆಸುತ್ತಾ ಇದ್ದೇವೆ ಮತ್ತು 2 ತಿಂಗಳ ಒಳಗಾಗಿ ಈ ರಸ್ತೆಯನ್ನು ದುರಸ್ಥಿ ಮಾಡದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಜನರನ್ನು ಸೇರಿಸಿ ಮತ್ತಷ್ಟು ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುದು ಎಂದು ಎಚ್ಚರಿಸಿದರು.

ಕುವೆಟ್ಟು ಬ್ಲಾಕ್ ಅಧ್ಯಕ್ಷ ಅಬ್ದುಲ್ ರವೂಫ್ ಪುಂಜಾಲಕಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರತಿಭಟನೆಯಲ್ಲಿ SDPI ಬೆಳ್ತಂಗಡಿ ವಿಧಾನಸಭಾ ಪಕ್ಷ ಸಂಘಟನಾ ಕಾರ್ಯದರ್ಶಿ ನಿಸಾರ್ ಕುದ್ರಡ್ಕ, ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಮುಸ್ತಫಾ ಜಿ.ಕೆ, ಶಮೀಮ್ ಸುನ್ನತ್ ಕೆರೆ, ರಿಯಾಝ್ ಮದ್ದಡ್ಕ, ಹಾಗೂ SDPI ಬೂತ್ ಅಧ್ಯಕ್ಷ ಅಶ್ರಫ್ ಸುನ್ನತ್ ಕೆರೆ ಮತ್ರು ಗ್ರಾಮ ಸಮಿತಿ ಅಧ್ಯಕ್ಷ ದಾವೂದ್ ಉಪಸ್ಥಿತರಿದ್ದರು.

ಕುವೆಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿಯವರು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.

ಸ್ವಾಲಿ ಮದ್ದಡ್ಕ ಸ್ವಾಗತಿಸಿ ಅಸ್ಲಂ ಮದ್ದಡ್ಕ ನಿರೂಪಿಸಿ ಧನ್ಯವಾದಗೈದರು.

Related posts

ಬರೆಂಗಾಯ ಮಹಮ್ಮಾಯಿ-ದೈವರಾಜ ಗುಳಿಗ ದೈವದ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya
error: Content is protected !!