27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

ಬೆಳ್ತಂಗಡಿ: ದ.ಕ.ಜಿಲ್ಲೆ ಮತ್ತು ಉಡುಪಿ ಜಿಲ್ಲೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಅ. 18 ರಂದು ಬೆಳಿಗ್ಗೆ 10:30 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಎ.ಐ.ಸಿ.ಸಿ. ವರ್ಕಿಂಗ್ ಕಮಿಟಿಯ ಸದಸ್ಯರಾಗಿ ನೇಮಕಗೊಂಡ ರಾಜ್ಯಸಭಾ ಸದಸ್ಯರೂ ಆಗಿರುವ ಡಾ. ನಾಸಿರ್ ಹುಸೈನ್ ರವರಿಗೆ ಮತ್ತು ಕೆ.ಪಿ.ಸಿ.ಸಿ. ಕಾರ್ಯಾದ್ಯಕ್ಷ, ಕರ್ನಾಟಕ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ನಡೆಯಲಿದೆ.


ಈ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರೂ, ವಿಧಾನ ಪರಿಷತ್ ನ ಶಾಸಕ ಅಬ್ದುಲ್ ಜಬ್ಬಾರ್, ಸಚಿವರಾದ ರಹೀಮ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಐವನ್ ಡಿಸೋಜರವರನ್ನು ಆಹ್ವಾನಿಸಿದರು.


ಈ ನಿಯೋಗದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ.ಕೆ.ಶಾಹುಲ್ ಹಮೀದ್, ಕೋಶಾಧಿಕಾರಿಯಾದ ಮಹಮ್ಮದ್ ಬಪ್ಪಳಿಗೆ,ಕಡಬ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಶೇಡಿಗುಂಡಿ,ಬಂಟ್ಟಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ರಾಜ್ಯ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾದ ಹಬೀಬುಲ್ಲ ಕನ್ನೂರು, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾದ್ಯಕ್ಷರಾದ ಹಸನಬ್ಬ ಚಾರ್ಮಾಡಿ, ದ.ಕ ಜಿಲ್ಲಾ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿಯಾದ ಶಬೀರ್ ಸಿದ್ದಕಟ್ಟೆ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಸಾಮಾಜಿಕ ಕಾರ್ಯಕರ್ತರಾದ ಇಲ್ಯಾಸ್ ಕಕ್ಕಿಂಜೆ, ಉದ್ಯಮಿಗಳಾದ ಉಸ್ಮಾನ್ ಕೊಳ್ಳೆಜಾಲ್ ಹಾಜರಿದ್ದರು.

Related posts

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya
error: Content is protected !!