22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

ಬೆಳ್ತಂಗಡಿ: ದ.ಕ.ಜಿಲ್ಲೆ ಮತ್ತು ಉಡುಪಿ ಜಿಲ್ಲೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಅ. 18 ರಂದು ಬೆಳಿಗ್ಗೆ 10:30 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಎ.ಐ.ಸಿ.ಸಿ. ವರ್ಕಿಂಗ್ ಕಮಿಟಿಯ ಸದಸ್ಯರಾಗಿ ನೇಮಕಗೊಂಡ ರಾಜ್ಯಸಭಾ ಸದಸ್ಯರೂ ಆಗಿರುವ ಡಾ. ನಾಸಿರ್ ಹುಸೈನ್ ರವರಿಗೆ ಮತ್ತು ಕೆ.ಪಿ.ಸಿ.ಸಿ. ಕಾರ್ಯಾದ್ಯಕ್ಷ, ಕರ್ನಾಟಕ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ನಡೆಯಲಿದೆ.


ಈ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರೂ, ವಿಧಾನ ಪರಿಷತ್ ನ ಶಾಸಕ ಅಬ್ದುಲ್ ಜಬ್ಬಾರ್, ಸಚಿವರಾದ ರಹೀಮ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಐವನ್ ಡಿಸೋಜರವರನ್ನು ಆಹ್ವಾನಿಸಿದರು.


ಈ ನಿಯೋಗದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ.ಕೆ.ಶಾಹುಲ್ ಹಮೀದ್, ಕೋಶಾಧಿಕಾರಿಯಾದ ಮಹಮ್ಮದ್ ಬಪ್ಪಳಿಗೆ,ಕಡಬ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಶೇಡಿಗುಂಡಿ,ಬಂಟ್ಟಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ರಾಜ್ಯ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾದ ಹಬೀಬುಲ್ಲ ಕನ್ನೂರು, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾದ್ಯಕ್ಷರಾದ ಹಸನಬ್ಬ ಚಾರ್ಮಾಡಿ, ದ.ಕ ಜಿಲ್ಲಾ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿಯಾದ ಶಬೀರ್ ಸಿದ್ದಕಟ್ಟೆ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಸಾಮಾಜಿಕ ಕಾರ್ಯಕರ್ತರಾದ ಇಲ್ಯಾಸ್ ಕಕ್ಕಿಂಜೆ, ಉದ್ಯಮಿಗಳಾದ ಉಸ್ಮಾನ್ ಕೊಳ್ಳೆಜಾಲ್ ಹಾಜರಿದ್ದರು.

Related posts

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya
error: Content is protected !!