32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

ಬೆಳ್ತಂಗಡಿ: ಅ.1 ರಂದು ಹುಬ್ಬಳ್ಳಿಯಲ್ಲಿ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನಡೆಸಿದ 14 ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್ ನಲ್ಲಿ ಬೆಳ್ತಂಗಡಿಯ ಯಮಾಟೋ ಶೊಟೊಖಾನ್ ಕರಾಟೆ ತರಗತಿಯ ವಿದ್ಯಾರ್ಥಿ ದೀಕ್ಷಿತಾ. ಕೆ ಇವರು -30 ಕೆ.ಜಿ ವಿಭಾಗದ ಕುಮಿತೆಯಲ್ಲಿ ಬೆಳ್ಳಿ ಪದಕ ವನ್ನು ಪಡೆದು ಡೆಹ್ರಾಡೂನ್ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ವೈಎಸ್‌ಕೆ ಬೆಳ್ತಂಗಡಿಯ ಕರಾಟೆ ಗುರುಗಳಾದ ಅಶೋಕ್ ಆಚಾರ್ಯ ಮತ್ತು ಕೋಚ್ ಮಿಥುನ್ ರವರಿಂದ ತರಬೇತಿ ಪಡೆಯುತ್ತಿದ್ದು ಇವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್‌ಟೇಬಲ್ ಕನಕರಾಜ್. ಆರ್ ಹಾಗೂ ಸುಮತಿ. ಕೆ ರವರ ಪುತ್ರಿಯಾಗಿದ್ದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿಬಿಎಸ್‌ಇ ಆಂಗ್ಲ ಮಾದ್ಯಮ ಶಾಲೆಯ 5 ನೇ ತರಗತಿಯ ಬಿ ವಿಭಾಗದ ವಿದ್ಯಾರ್ಥಿಯಾಗಿರುತ್ತಾರೆ.

Related posts

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya
error: Content is protected !!