37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧಮ೯ಸ್ಥಳ: ಇಲ್ಲಿನ ರೈಸ್ ಆಯಿಲ್ ಫ್ಲೋರ್ ಮಿಲ್ಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣಪ್ಪ ಸಫಲ್ಯ (60ವ) ಎಂಬವರ ಮೃತದೇಹ ಸೆ.3 ರಂದು ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿಸಿಟ್ಟಿರುವ ದೊಡ್ಡ ಗಾತ್ರದ ಸ್ಟೀಲ್ ಪಾತ್ರೆಯ ಒಳಗೆ ನೀರಿನಲ್ಲಿ ಕವುಚಿ ತೇಲಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮೃತರ ಪುತ್ರ ವಿನಯ್ ಕುಮಾರ್ ರವರ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಕೃಷ್ಣಪ್ಪ ಸಫಲ್ಯ ರವರು ರೈಸ್ ಆಯಿಲ್ ಫ್ಲೋರ್ ಮಿಲ್ಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಪ್ರತಿನಿತ್ಯ ಮದ್ಯ ಸೇವನೆ ಮಾಡುವ ಚಟ ಹೊಂದಿದ್ದರು. ಸೆ.3 ರಂದು ಬೆಳಿಗ್ಗೆ ಸದರಿ ರೈಸ್ ಮಿಲ್ಲಿಗೆ ಹೋದವರು ಮಧ್ಯಾಹ್ನ ಮನೆಗೆ ಬಂದಿರಲಿಲ್ಲ,
ಸಂಜೆ ಅಲ್ಲಿಂದ ಬಂದ ಮಾಹಿತಿಯಂತೆ ಹೋಗಿ ನೋಡಲಾಗಿ ಸ್ಟೀಲ್ ಪಾತ್ರೆಯ ಮೇಲ್ಭಾಗವನ್ನು ಅರ್ಧದಷ್ಟು ಸಿಮೆಂಟ್ ಶೀಟ್ ನ್ನು ಮುಚ್ಚಿದ್ದು, ಕೃಷ್ಣಪ್ಪ ಸಫಲ್ಯ ರವರು ಸ್ಟೀಲ್ನ ದೊಡ್ಡ ಗಾತ್ರದ ಪಾತ್ರೆಯಲ್ಲಿ ತುಂಬಿಸಿಟ್ಟಿದ್ದ ನೀರಿಗೆ ಇಳಿದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಂತೆ ಕಂಡುಬಂದಿದೆ ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು ಡಿ ಆರ್ ಸಂಖ್ಯೆ 65/2023 ಕಲಂ: 174 (iii)& (iv) ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya
error: Content is protected !!