April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧಮ೯ಸ್ಥಳ: ಇಲ್ಲಿನ ರೈಸ್ ಆಯಿಲ್ ಫ್ಲೋರ್ ಮಿಲ್ಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣಪ್ಪ ಸಫಲ್ಯ (60ವ) ಎಂಬವರ ಮೃತದೇಹ ಸೆ.3 ರಂದು ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿಸಿಟ್ಟಿರುವ ದೊಡ್ಡ ಗಾತ್ರದ ಸ್ಟೀಲ್ ಪಾತ್ರೆಯ ಒಳಗೆ ನೀರಿನಲ್ಲಿ ಕವುಚಿ ತೇಲಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮೃತರ ಪುತ್ರ ವಿನಯ್ ಕುಮಾರ್ ರವರ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಕೃಷ್ಣಪ್ಪ ಸಫಲ್ಯ ರವರು ರೈಸ್ ಆಯಿಲ್ ಫ್ಲೋರ್ ಮಿಲ್ಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಪ್ರತಿನಿತ್ಯ ಮದ್ಯ ಸೇವನೆ ಮಾಡುವ ಚಟ ಹೊಂದಿದ್ದರು. ಸೆ.3 ರಂದು ಬೆಳಿಗ್ಗೆ ಸದರಿ ರೈಸ್ ಮಿಲ್ಲಿಗೆ ಹೋದವರು ಮಧ್ಯಾಹ್ನ ಮನೆಗೆ ಬಂದಿರಲಿಲ್ಲ,
ಸಂಜೆ ಅಲ್ಲಿಂದ ಬಂದ ಮಾಹಿತಿಯಂತೆ ಹೋಗಿ ನೋಡಲಾಗಿ ಸ್ಟೀಲ್ ಪಾತ್ರೆಯ ಮೇಲ್ಭಾಗವನ್ನು ಅರ್ಧದಷ್ಟು ಸಿಮೆಂಟ್ ಶೀಟ್ ನ್ನು ಮುಚ್ಚಿದ್ದು, ಕೃಷ್ಣಪ್ಪ ಸಫಲ್ಯ ರವರು ಸ್ಟೀಲ್ನ ದೊಡ್ಡ ಗಾತ್ರದ ಪಾತ್ರೆಯಲ್ಲಿ ತುಂಬಿಸಿಟ್ಟಿದ್ದ ನೀರಿಗೆ ಇಳಿದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಂತೆ ಕಂಡುಬಂದಿದೆ ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು ಡಿ ಆರ್ ಸಂಖ್ಯೆ 65/2023 ಕಲಂ: 174 (iii)& (iv) ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!