26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧಮ೯ಸ್ಥಳ: ಇಲ್ಲಿನ ರೈಸ್ ಆಯಿಲ್ ಫ್ಲೋರ್ ಮಿಲ್ಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣಪ್ಪ ಸಫಲ್ಯ (60ವ) ಎಂಬವರ ಮೃತದೇಹ ಸೆ.3 ರಂದು ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿಸಿಟ್ಟಿರುವ ದೊಡ್ಡ ಗಾತ್ರದ ಸ್ಟೀಲ್ ಪಾತ್ರೆಯ ಒಳಗೆ ನೀರಿನಲ್ಲಿ ಕವುಚಿ ತೇಲಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮೃತರ ಪುತ್ರ ವಿನಯ್ ಕುಮಾರ್ ರವರ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಕೃಷ್ಣಪ್ಪ ಸಫಲ್ಯ ರವರು ರೈಸ್ ಆಯಿಲ್ ಫ್ಲೋರ್ ಮಿಲ್ಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಪ್ರತಿನಿತ್ಯ ಮದ್ಯ ಸೇವನೆ ಮಾಡುವ ಚಟ ಹೊಂದಿದ್ದರು. ಸೆ.3 ರಂದು ಬೆಳಿಗ್ಗೆ ಸದರಿ ರೈಸ್ ಮಿಲ್ಲಿಗೆ ಹೋದವರು ಮಧ್ಯಾಹ್ನ ಮನೆಗೆ ಬಂದಿರಲಿಲ್ಲ,
ಸಂಜೆ ಅಲ್ಲಿಂದ ಬಂದ ಮಾಹಿತಿಯಂತೆ ಹೋಗಿ ನೋಡಲಾಗಿ ಸ್ಟೀಲ್ ಪಾತ್ರೆಯ ಮೇಲ್ಭಾಗವನ್ನು ಅರ್ಧದಷ್ಟು ಸಿಮೆಂಟ್ ಶೀಟ್ ನ್ನು ಮುಚ್ಚಿದ್ದು, ಕೃಷ್ಣಪ್ಪ ಸಫಲ್ಯ ರವರು ಸ್ಟೀಲ್ನ ದೊಡ್ಡ ಗಾತ್ರದ ಪಾತ್ರೆಯಲ್ಲಿ ತುಂಬಿಸಿಟ್ಟಿದ್ದ ನೀರಿಗೆ ಇಳಿದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಂತೆ ಕಂಡುಬಂದಿದೆ ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು ಡಿ ಆರ್ ಸಂಖ್ಯೆ 65/2023 ಕಲಂ: 174 (iii)& (iv) ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya
error: Content is protected !!