July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

ಬೆಳ್ತಂಗಡಿ : ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಅ. 6 ರಂದು ನಡೆದ ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.

ಆಲ್ಸ್ಟನ್ ಡಿಸೋಜ (8ನೇ) 200ಮೀ ಓಟದಲ್ಲಿ ಪ್ರಥಮ, 400ಮೀ ಓಟದಲ್ಲಿ ಪ್ರಥಮ ಮತ್ತು 600 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಆಗಿ ಮಿಂಚಿದ್ದಾರೆ. ಮನ್ವಿತ್ (7ನೇ) ಗುಂಡೆಸೆತ ಪ್ರಥಮ ಸ್ಥಾನ ಹಾಗೂ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ, ಶ್ರೇಯಸ್ (7ನೇ) 600ಮೀ ಮತ್ತು 400ಮೀ ಓಟದಲ್ಲಿ ದ್ವಿತೀಯ ಸ್ಥಾನ,
ವೀವನ್ ಡಿಸೋಜ (8ನೇ) 600ಮೀ ಓಟದಲ್ಲಿ ತೃತೀಯ ಸ್ಥಾನ, ಅನನ್ಯ(7ನೇ) ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.


ಆಲ್ಸ್ಟನ್ ಡಿಸೋಜ (8ನೇ), ವೀವನ್ ಡಿಸೋಜ (8ನೇ), ರೆಹಾಂತ್ (8ನೇ), ಹಾಗೂ ಪ್ರಜ್ವಲ್ (8ನೇ) ರಿಲೇಯಲ್ಲಿ ಪ್ರಥಮ ಸ್ಥಾನ ಮತ್ತು ಅಭೀಶ್ (7ನೇ), ಅರ್ವಿನ್ (7ನೇ), ಸನತ್ (7ನೇ) ಹಾಗೂ ಶ್ರೇಯಸ್ (7ನೇ) ಪ್ರಾಥಮಿಕ ವಿಭಾಗದ ರಿಲೇಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶರತ್ ಸಂತೋಷ್ ಪಿಂಟೋ ತರಬೇತಿ ನೀಡಿರುತ್ತಾರೆ.

ಶಾಲಾ ಸಂಚಾಲಕರಾದ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya
error: Content is protected !!