September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮೂಡಬಿದ್ರೆಯ ಶಿರ್ತಾಡಿ ಗ್ರಾಮದ ಲಕ್ಷ್ಮಣ ಪೂಜಾರಿ (62ವ) ಎಂಬವರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಮಹಿಳೆ ಸಹಿತ ಇಬ್ಬರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.6ರಂದು ಸಂಜೆ ಶಿರ್ತಾಡಿಯ ಲಕ್ಷ್ಮಣ ಪೂಜಾರಿಯವರು ತನ್ನ ಹೆಂಡತಿಯ ತವರು ಮನೆಯಾದ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ನೆಕ್ಕರೆ ಎಂಬಲ್ಲಿ ತನ್ನ ಪ್ರಾಯಸ್ಥ ಮಾವನೊಂದಿಗೆ ಮನೆಯಂಗಳದಲ್ಲಿದ್ದಾಗ ಉಮೇಶ್ ಎಂಬಾತ ಮರದ ದೊಣ್ಣೆ ಹಿಡಿದುಕೊಂಡು ಜ್ಯೋತಿ ಎಂಬವರೊಂದಿಗೆ ಬಂದು ಅವ್ಯಾಚವಾಗಿ ಬೈದು ನಿನ್ನನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಹಲ್ಲೆ ನಡೆಸಿದ್ದಾರೆ. ಜ್ಯೋತಿ ಅವರು ಲಕ್ಷ್ಮಣ ಪೂಜಾರಿಯವರಿಗೆ ಕೈಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಲಕ್ಷ್ಮಣ ಪೂಜಾರಿಯವರ ಹೆಂಡತಿ ಮತ್ತು ಮಕ್ಕಳು ಹಲ್ಲೆ ನಡೆಸದಂತೆ ತಡೆದಾಗ ಉಮೇಶ್ ಅವರು ಲಕ್ಷ್ಮಣ ಪೂಜಾರಿಯವರಿಗೆ ಜೀವ ಬೆದರಿಕೆ ಹಾಕಿ ತೆರಳಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ಲಕ್ಷ್ಮಣ ಪೂಜಾರಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ 64/2023 ಕಲಂ 504, 323,307 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Related posts

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಸಿಬ್ಬಂದಿ ಸ್ಪಂದನಾ ಎಮ್.ಎಸ್. ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya
error: Content is protected !!