22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

ವೇಣೂರು: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘ (ರಿ.) ಬೆಳ್ತಂಗಡಿ ಇದರ ಜಂಟಿ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮವು ಅ.10ರಂದು ವೇಣೂರು ಕರಿಮಣೇಲು ಶ್ರೀಮತಿ ಸೀತಾ ತೌಡ ಭಂಡಾರಿಯವರ ಗದ್ದೆಯಲ್ಲಿ ಜರುಗಲಿರುವುದು. ಸಂಘದ ಗೌರಾವಾಧ್ಯಕ್ಷ ಎ. ಪೂವಪ್ಪ ಭಂಡಾರಿ ಪಣೆಜಾಲು ದೀಪ ಪ್ರಜ್ವಲನೆ ನಡೆಸಲಿರುವರು.


ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ ಭಂಡಾರಿ ಉಜಿರೆ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಕಿಶೋರ ಕುಮಾರ್ ಬೊಟ್ಯಾಡಿ ಪುತ್ತೂರು, ಶ್ರೀಮತಿ ಸೀತಾ ತೌಡ ಭಂಡಾರಿ ಕರಿಮಣೇಲು ಭಾಗವಹಿಸಲಿದ್ದಾರೆ. ಉದ್ಯಮಿ ಭಾಸ್ಕರ ಪೈ, ಪ್ರಗತಿಪರ ಕೃಷಿಕ ಬಾಲಕೃಷ್ಣ ಭಟ್ ದಡ್ಡು, ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗುರುದಾಸ ಭಂಡಾರಿ, ಪುತ್ತೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗಿರೀಶ್ ಭಂಡಾರಿ, ಬೆಳ್ತಂಗಡಿ ಸವಿತಾ ಸಮಾಜ ಅಧ್ಯಕ್ಷ ಗೋಪಾಲ ಭಂಡಾರಿ, ಮಂಗಳೂರು ಯುವ ವೇದಿಕೆ ಅಧ್ಯಕ್ಷ ನಿತ್ಯಾನಂದ ತಲಪಾಡಿ, ವೇಣೂರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಸುಧೀರ್ ಭಂಡಾರಿ, ಯುವ ವೇದಿಕೆ ಕಾರ್ಯದರ್ಶಿ ಪ್ರಶಾಂತ್ ಭಂಡಾರಿ ಅಂಡಿಂಜೆ, ರಮ್ಯ ಪ್ರವೀಣ್ ಭಂಡಾರಿ ಗೌರವ ಉಪಸ್ಥಿತರಿರುವರು.

ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ವಯಸ್ಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿರುವುದು.

ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಚೂರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್‌ನ ಬೆಂಗಳೂರು ಆಡಳಿತ ಮೊಕ್ತೇಸರ ಲಕ್ಷ್ಮಣ ಕರಾವಳಿ, ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ ಕಾರ್ಕಳ, ಶಾಸಕ ಹರೀಶ್ ಪೂಂಜ, ಉದ್ಯಮಿ ಸದಾಶಿವ ಭಂಡಾರಿ ಸಕಲೇಶಪುರ ಮೊದಲಾದವರು ಉಪಸ್ಥಿತರಿರುವರು.

Related posts

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಎ 28-ಮೇ1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ-ಶಾಸಕ ಹರೀಶ್ ಪೂಂಜರಿಂದ ಕಲಶ ಕೂಪನ್ ಬಿಡುಗಡೆ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya
error: Content is protected !!