22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

ವೇಣೂರು: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘ (ರಿ.) ಬೆಳ್ತಂಗಡಿ ಇದರ ಜಂಟಿ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮವು ಅ.10ರಂದು ವೇಣೂರು ಕರಿಮಣೇಲು ಶ್ರೀಮತಿ ಸೀತಾ ತೌಡ ಭಂಡಾರಿಯವರ ಗದ್ದೆಯಲ್ಲಿ ಜರುಗಲಿರುವುದು. ಸಂಘದ ಗೌರಾವಾಧ್ಯಕ್ಷ ಎ. ಪೂವಪ್ಪ ಭಂಡಾರಿ ಪಣೆಜಾಲು ದೀಪ ಪ್ರಜ್ವಲನೆ ನಡೆಸಲಿರುವರು.


ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ ಭಂಡಾರಿ ಉಜಿರೆ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಕಿಶೋರ ಕುಮಾರ್ ಬೊಟ್ಯಾಡಿ ಪುತ್ತೂರು, ಶ್ರೀಮತಿ ಸೀತಾ ತೌಡ ಭಂಡಾರಿ ಕರಿಮಣೇಲು ಭಾಗವಹಿಸಲಿದ್ದಾರೆ. ಉದ್ಯಮಿ ಭಾಸ್ಕರ ಪೈ, ಪ್ರಗತಿಪರ ಕೃಷಿಕ ಬಾಲಕೃಷ್ಣ ಭಟ್ ದಡ್ಡು, ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗುರುದಾಸ ಭಂಡಾರಿ, ಪುತ್ತೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗಿರೀಶ್ ಭಂಡಾರಿ, ಬೆಳ್ತಂಗಡಿ ಸವಿತಾ ಸಮಾಜ ಅಧ್ಯಕ್ಷ ಗೋಪಾಲ ಭಂಡಾರಿ, ಮಂಗಳೂರು ಯುವ ವೇದಿಕೆ ಅಧ್ಯಕ್ಷ ನಿತ್ಯಾನಂದ ತಲಪಾಡಿ, ವೇಣೂರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಸುಧೀರ್ ಭಂಡಾರಿ, ಯುವ ವೇದಿಕೆ ಕಾರ್ಯದರ್ಶಿ ಪ್ರಶಾಂತ್ ಭಂಡಾರಿ ಅಂಡಿಂಜೆ, ರಮ್ಯ ಪ್ರವೀಣ್ ಭಂಡಾರಿ ಗೌರವ ಉಪಸ್ಥಿತರಿರುವರು.

ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ವಯಸ್ಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿರುವುದು.

ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಚೂರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್‌ನ ಬೆಂಗಳೂರು ಆಡಳಿತ ಮೊಕ್ತೇಸರ ಲಕ್ಷ್ಮಣ ಕರಾವಳಿ, ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ ಕಾರ್ಕಳ, ಶಾಸಕ ಹರೀಶ್ ಪೂಂಜ, ಉದ್ಯಮಿ ಸದಾಶಿವ ಭಂಡಾರಿ ಸಕಲೇಶಪುರ ಮೊದಲಾದವರು ಉಪಸ್ಥಿತರಿರುವರು.

Related posts

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!