ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: “ಉತ್ತಮ ಶಿಕ್ಷಣವನ್ನು ಮಗು ಪಡೆಯಬೇಕಾದರೆ ಶಿಕ್ಷಕರ ಪಾತ್ರ ಹಾಗೂ ಪೋಷಕರ ಪಾತ್ರ ಅತ್ಯಂತ ಅಮೂಲ್ಯವಾದುದು. ಪ್ರಸ್ತುತ ಕಾಲಮಾನದಲ್ಲಿ ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಹೆಚ್ಚಿನ ಗಮನವಹಿಸುವುದು ಮುಖ್ಯ” ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ ಹೇಳಿದರು.

ಇವರು ಅ.6 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಏರ್ಪಡಿಸಿದ್ದ ಪೋಷಕರ ಸಭೆಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ಶಿಕ್ಷಕಿ ನೀತು ಪ್ರಸಾದ್ ನಿರೂಪಣೆ ಮಾಡಿದರು.

Leave a Comment

error: Content is protected !!