23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮೂಡಬಿದ್ರೆಯ ಶಿರ್ತಾಡಿ ಗ್ರಾಮದ ಲಕ್ಷ್ಮಣ ಪೂಜಾರಿ (62ವ) ಎಂಬವರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಮಹಿಳೆ ಸಹಿತ ಇಬ್ಬರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.6ರಂದು ಸಂಜೆ ಶಿರ್ತಾಡಿಯ ಲಕ್ಷ್ಮಣ ಪೂಜಾರಿಯವರು ತನ್ನ ಹೆಂಡತಿಯ ತವರು ಮನೆಯಾದ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ನೆಕ್ಕರೆ ಎಂಬಲ್ಲಿ ತನ್ನ ಪ್ರಾಯಸ್ಥ ಮಾವನೊಂದಿಗೆ ಮನೆಯಂಗಳದಲ್ಲಿದ್ದಾಗ ಉಮೇಶ್ ಎಂಬಾತ ಮರದ ದೊಣ್ಣೆ ಹಿಡಿದುಕೊಂಡು ಜ್ಯೋತಿ ಎಂಬವರೊಂದಿಗೆ ಬಂದು ಅವ್ಯಾಚವಾಗಿ ಬೈದು ನಿನ್ನನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಹಲ್ಲೆ ನಡೆಸಿದ್ದಾರೆ. ಜ್ಯೋತಿ ಅವರು ಲಕ್ಷ್ಮಣ ಪೂಜಾರಿಯವರಿಗೆ ಕೈಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಲಕ್ಷ್ಮಣ ಪೂಜಾರಿಯವರ ಹೆಂಡತಿ ಮತ್ತು ಮಕ್ಕಳು ಹಲ್ಲೆ ನಡೆಸದಂತೆ ತಡೆದಾಗ ಉಮೇಶ್ ಅವರು ಲಕ್ಷ್ಮಣ ಪೂಜಾರಿಯವರಿಗೆ ಜೀವ ಬೆದರಿಕೆ ಹಾಕಿ ತೆರಳಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ಲಕ್ಷ್ಮಣ ಪೂಜಾರಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ 64/2023 ಕಲಂ 504, 323,307 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Related posts

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya
error: Content is protected !!