23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮೂಡಬಿದ್ರೆಯ ಶಿರ್ತಾಡಿ ಗ್ರಾಮದ ಲಕ್ಷ್ಮಣ ಪೂಜಾರಿ (62ವ) ಎಂಬವರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಮಹಿಳೆ ಸಹಿತ ಇಬ್ಬರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.6ರಂದು ಸಂಜೆ ಶಿರ್ತಾಡಿಯ ಲಕ್ಷ್ಮಣ ಪೂಜಾರಿಯವರು ತನ್ನ ಹೆಂಡತಿಯ ತವರು ಮನೆಯಾದ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ನೆಕ್ಕರೆ ಎಂಬಲ್ಲಿ ತನ್ನ ಪ್ರಾಯಸ್ಥ ಮಾವನೊಂದಿಗೆ ಮನೆಯಂಗಳದಲ್ಲಿದ್ದಾಗ ಉಮೇಶ್ ಎಂಬಾತ ಮರದ ದೊಣ್ಣೆ ಹಿಡಿದುಕೊಂಡು ಜ್ಯೋತಿ ಎಂಬವರೊಂದಿಗೆ ಬಂದು ಅವ್ಯಾಚವಾಗಿ ಬೈದು ನಿನ್ನನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಹಲ್ಲೆ ನಡೆಸಿದ್ದಾರೆ. ಜ್ಯೋತಿ ಅವರು ಲಕ್ಷ್ಮಣ ಪೂಜಾರಿಯವರಿಗೆ ಕೈಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಲಕ್ಷ್ಮಣ ಪೂಜಾರಿಯವರ ಹೆಂಡತಿ ಮತ್ತು ಮಕ್ಕಳು ಹಲ್ಲೆ ನಡೆಸದಂತೆ ತಡೆದಾಗ ಉಮೇಶ್ ಅವರು ಲಕ್ಷ್ಮಣ ಪೂಜಾರಿಯವರಿಗೆ ಜೀವ ಬೆದರಿಕೆ ಹಾಕಿ ತೆರಳಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ಲಕ್ಷ್ಮಣ ಪೂಜಾರಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ 64/2023 ಕಲಂ 504, 323,307 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Related posts

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya
error: Content is protected !!