July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಳೆಂಜ ಗ್ರಾಮದ ಅಮ್ಮಿನಡ್ಕದ ಅರಣ್ಯ ಇಲಾಖೆಗೆ ಸೇರಿದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಅ.7 ರಂದು ಅಕ್ರಮವಾಗಿ ಮನೆ ನಿರ್ಮಾಣ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಗ್ಗೆ ಅ.7 ರಂದು ರಾತ್ರಿ ಉಪ್ಪಿನಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ಜಯಪ್ರಕಾಶ್.ಕೆಕೆ ನೀಡಿದ ದೂರಿನ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರ್.ಎಫ್.ಓ ನೀಡಿದ ದೂರಿನ ಪ್ರತಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿಡ್ಲೆ ವಿಸ್ತೃತಾ ಬ್ಲಾಕ್ 2 ಮೀಸಲು ಅರಣ್ಯ ಪ್ರದೇಶದಲ್ಲಿ ಮೋಜಣಿ ಕಾರ್ಯನಿರ್ವಾಹಿಸುತ್ತಿರುವ ಸಮಯ 1:30 ಸಮಯಕ್ಕೆ ಸುಮಾರು 11 ಜನ ಆರೋಪಿಗಳು ಮತ್ತು ಇತರರು ಸೇರಿಕೊಂಡು ಏಕಾಏಕಿಯಾಗಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುದ್ವ ನಿವಾಸಿ ಒಂದು ದೇವಣ್ಣ ಗೌಡರ ಮಗ ಲೋಲಾಕ್ಷ ಯಾನೆ ಅನಂತು ರವರಿಗೆ ಅರಣ್ಯ ಇಲಾಖೆ ಜಾಗದಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿದ್ದ ಜಾಗದಲ್ಲಿ ಕಟ್ಟಡವನ್ನು ನಿರ್ಮಿಸಲು ಒತ್ತುವರಿದಾರರ ಪರವಾಗಿ ನಿಂತು ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣದ ಆರೋಪಿಗಲಾದ ಲೋಲಾಕ್ಷ ಯಾನೆ ಅನಂತು, ಹರೀಶ್ ಕೊಯಿಲ, ಪ್ರಸನ್ನ ಮಾಣಿಗೇರಿ, ಯಶವಂತ ಗೌಡ, ನೊಣಯ್ಯ ಗೌಡ, ಜನಾರ್ಧನ ಗೌಡ, ಪದ್ಮನಾಭ ಗೌಡ , ಧನಂಜಯ ಗೌಡ,ರಾಮಚಂದ್ರ ಮೇಸ್ತ್ರಿ, ಶ್ರೀನಿವಾಸ್ ಗೌಡ, ಉದಯ ಗೌಡ ಮತ್ತು ಇತರರ ವಿರುದ್ಧ ದೂರು ದಾಖಲಾಗಿದೆ.

ಈ ಬಗ್ಗೆ ಉಪ್ಪಿನಂಗಡಿ ಆರ್.ಎಫ್.ಓ ಜಯಪ್ರಕಾಶ್.ಕೆ.ಕೆ ನೀಡಿದ ದೂರಿನ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ IPC 1860(U/s 353,143,149) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ,ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಉಜಿರೆ ಅನುಗ್ರಹ ಶಾಲಾ ಪ್ರಾರಂಭೋತ್ಸವ

Suddi Udaya

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!