23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

ನಾವೂರು : ಕಳೆದ 24 ವರ್ಷಗಳ ಹಿಂದೆ ನವೋದಯ ಯುವಕ ಮಂಡಲದ ಸದಸ್ಯರುಗಳ ಧಾರ್ಮಿಕ ಚಿಂತನೆಯೊಂದಿಗೆ ನಾವೂರು ಸರಕಾರಿ ಶಾಲೆಯಲ್ಲಿ ಪ್ರಾರಂಭಗೊಂಡಿದೆ.
ಪ್ರಸ್ತುತ ವರ್ಷದ ಕಾರ್ಯಕ್ರಮವು ಅ. 20ರ ಶುಕ್ರವಾರ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ ಶಾರದಾ ಪೂಜೆ ನಡೆಯಲಿದೆ.
ಇದರ ಆಮಂತ್ರಣ ಪತ್ರಿಕೆಯನ್ನು ಅ.8 ರಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗೌರವ ಸಲಹೆಗಾರರು, ಮಾರ್ಗದರ್ಶರಾದ ಡಾ. ಪ್ರದೀಪ್ ಆಟಿಕುಕ್ಕೆ ಬಿಡುಗಡೆ ಮಾಡಿ ಶುಭಹಾರೈಸಿದರು.


25ನೇ ವರ್ಷದ ಅಂಗವಾಗಿ ಡ್ಯಾಝಲ್ ಸ್ಟುಡಿಯೋ ಮೂಲ್ಕಿ ಅರ್ಪಿಸುವ ಮಯೋಡ್ ಮೆರೆಯಿನ ಸತ್ಯೋಲ್ನ ಕಥೆ “ಕಾರ್ಣಿಕದ ಗತ ವೈಭವ” ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಾಗ್ಮಿ, ಧಾರ್ಮಿಕ ಚಿಂತಕಿ ಅಕ್ಷಯ ಗೋಖಲೆ ಕಾರ್ಕಳ, ಇವರು ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಹರೀಶ್ ಕಾರಿಂಜ, ಉಪಾಧ್ಯಕ್ಷರಾದ ಪ್ರಮೋದ್ ಸಾಲ್ಯಾನ್ ಮೋರ್ತಾಜೆ, ಕಾರ್ಯದರ್ಶಿ ಬಾಲಕೃಷ್ಣ, ಸದಸ್ಯರುಗಳಾದ ಪ್ರದೀಪ್ ಗೌಡ ನಾಗಜೆ, ಕೃಷ್ಣಪ್ಪ ಪೂಜಾರಿ ಬೊಂತ್ರಪಾಲು, ಉದಯ ಬಂಗೇರ ಬೋಲೋಟ್ಟು, ಮೋಹನ ತಿಮರಡ್ಡ, ನವೀನ್ ಪೂಜಾರಿ, ವಸಂತ ಗೌಡ, ಶ್ರೀಮತಿ ಸುಮಾ ಕಿರ್ನಡ್ಕ ಉಪಸ್ಥಿತರಿದ್ದರು.

Related posts

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿ ದಿಯಾ ಆಳ್ವ ದ್ವಿತೀಯ

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!