ಗ್ರಾಮಾಂತರ ಸುದ್ದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

ನಾವೂರು : ಕಳೆದ 24 ವರ್ಷಗಳ ಹಿಂದೆ ನವೋದಯ ಯುವಕ ಮಂಡಲದ ಸದಸ್ಯರುಗಳ ಧಾರ್ಮಿಕ ಚಿಂತನೆಯೊಂದಿಗೆ ನಾವೂರು ಸರಕಾರಿ ಶಾಲೆಯಲ್ಲಿ ಪ್ರಾರಂಭಗೊಂಡಿದೆ.
ಪ್ರಸ್ತುತ ವರ್ಷದ ಕಾರ್ಯಕ್ರಮವು ಅ. 20ರ ಶುಕ್ರವಾರ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ ಶಾರದಾ ಪೂಜೆ ನಡೆಯಲಿದೆ.
ಇದರ ಆಮಂತ್ರಣ ಪತ್ರಿಕೆಯನ್ನು ಅ.8 ರಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗೌರವ ಸಲಹೆಗಾರರು, ಮಾರ್ಗದರ್ಶರಾದ ಡಾ. ಪ್ರದೀಪ್ ಆಟಿಕುಕ್ಕೆ ಬಿಡುಗಡೆ ಮಾಡಿ ಶುಭಹಾರೈಸಿದರು.


25ನೇ ವರ್ಷದ ಅಂಗವಾಗಿ ಡ್ಯಾಝಲ್ ಸ್ಟುಡಿಯೋ ಮೂಲ್ಕಿ ಅರ್ಪಿಸುವ ಮಯೋಡ್ ಮೆರೆಯಿನ ಸತ್ಯೋಲ್ನ ಕಥೆ “ಕಾರ್ಣಿಕದ ಗತ ವೈಭವ” ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಾಗ್ಮಿ, ಧಾರ್ಮಿಕ ಚಿಂತಕಿ ಅಕ್ಷಯ ಗೋಖಲೆ ಕಾರ್ಕಳ, ಇವರು ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಹರೀಶ್ ಕಾರಿಂಜ, ಉಪಾಧ್ಯಕ್ಷರಾದ ಪ್ರಮೋದ್ ಸಾಲ್ಯಾನ್ ಮೋರ್ತಾಜೆ, ಕಾರ್ಯದರ್ಶಿ ಬಾಲಕೃಷ್ಣ, ಸದಸ್ಯರುಗಳಾದ ಪ್ರದೀಪ್ ಗೌಡ ನಾಗಜೆ, ಕೃಷ್ಣಪ್ಪ ಪೂಜಾರಿ ಬೊಂತ್ರಪಾಲು, ಉದಯ ಬಂಗೇರ ಬೋಲೋಟ್ಟು, ಮೋಹನ ತಿಮರಡ್ಡ, ನವೀನ್ ಪೂಜಾರಿ, ವಸಂತ ಗೌಡ, ಶ್ರೀಮತಿ ಸುಮಾ ಕಿರ್ನಡ್ಕ ಉಪಸ್ಥಿತರಿದ್ದರು.

Related posts

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

Suddi Udaya

ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಬಾಲಕಿಯರ ಶೌಚಾಲಯ ಕೊಡುಗೆ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya
error: Content is protected !!