July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

ಉಜಿರೆ:ಪರಮಪೂಜ್ಯ ಡಾ| ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ,ಮಾತೃಶ್ರೀ ಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, (ರಿ) ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆಯನ್ನು ಅ. 8 ರಂದು ಬೆಳ್ತಂಗಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ-ಬಿ ಬೆಳಾಲಿನಲ್ಲಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಎಮ್.ಸಿ ಅಧ್ಯಕ್ಷರು ಸಂತೋಷ್ ಮಾಡಿವಾಳ, ಉದ್ಘಾಟಕರಾಗಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ವಿಧ್ಯಾ ಶ್ರೀನಿವಾಸ ಗೌಡ, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್, ರೋಟರಿ ಕ್ಲಬ್ ಅಧ್ಯಕ್ಷರು ಅನಂತ ಭಟ್ ಮಚ್ಚಿಮಲೆ , ಬೆಳಾಲು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸತೀಶ್ ಗೌಡ ಎಳ್ಳುಗದ್ದೆ, ಪೆರಿಯಡ್ಕ ಚಿತ್ತಾರ ಯುವಶಕ್ತಿ ಗೆಳೆಯರ ಬಳಗದ ಅಧ್ಯಕ್ಷರಾದ ಶ್ರೀಯುತ ರಾಜೇಶ್ , ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿಜಯ, ಜ್ಞಾನ ದೀಪ ಶಿಕ್ಷಕಿ ಭವ್ಯಶ್ರೀ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಸಹಶಿಕ್ಷಕಿ ಶ್ರೀಮತಿ ಜಯಶ್ರೀ.ಬಿ.ಕೆ ಯವರು ನಿರೂಪಣೆ ಮಾಡಿ ಧನ್ಯವಾದ ಮಂಡಿಸಿದರು‌.

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸದಸ್ಯರಿಂದ ಶಾಲೆಯ ಕಟ್ಟಡವನ್ನು ಸ್ವಚ್ಚಗೊಳಿಸಿ ಸುಣ್ಣ ಬಣ್ಣ ಹೊಡೆಯುವ ಕೆಲಸವನ್ನು ಆರಂಭಿಸಲಾಯಿತು. ನವೆಂಬರ್ ತಿಂಗಳಲ್ಲಿ ಶಾಲೆಯನ್ನು ಸಂಪೂರ್ಣ ಅಭಿವೃದ್ಧಿಪಡಿಸಿ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಲಿದೆ.

Related posts

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya
error: Content is protected !!