ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು : ಕಳೆದ 24 ವರ್ಷಗಳ ಹಿಂದೆ ನವೋದಯ ಯುವಕ ಮಂಡಲದ ಸದಸ್ಯರುಗಳ ಧಾರ್ಮಿಕ ಚಿಂತನೆಯೊಂದಿಗೆ ನಾವೂರು ಸರಕಾರಿ ಶಾಲೆಯಲ್ಲಿ ಪ್ರಾರಂಭಗೊಂಡಿದೆ.
ಪ್ರಸ್ತುತ ವರ್ಷದ ಕಾರ್ಯಕ್ರಮವು ಅ. 20ರ ಶುಕ್ರವಾರ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ ಶಾರದಾ ಪೂಜೆ ನಡೆಯಲಿದೆ.
ಇದರ ಆಮಂತ್ರಣ ಪತ್ರಿಕೆಯನ್ನು ಅ.8 ರಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗೌರವ ಸಲಹೆಗಾರರು, ಮಾರ್ಗದರ್ಶರಾದ ಡಾ. ಪ್ರದೀಪ್ ಆಟಿಕುಕ್ಕೆ ಬಿಡುಗಡೆ ಮಾಡಿ ಶುಭಹಾರೈಸಿದರು.


25ನೇ ವರ್ಷದ ಅಂಗವಾಗಿ ಡ್ಯಾಝಲ್ ಸ್ಟುಡಿಯೋ ಮೂಲ್ಕಿ ಅರ್ಪಿಸುವ ಮಯೋಡ್ ಮೆರೆಯಿನ ಸತ್ಯೋಲ್ನ ಕಥೆ “ಕಾರ್ಣಿಕದ ಗತ ವೈಭವ” ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಾಗ್ಮಿ, ಧಾರ್ಮಿಕ ಚಿಂತಕಿ ಅಕ್ಷಯ ಗೋಖಲೆ ಕಾರ್ಕಳ, ಇವರು ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಹರೀಶ್ ಕಾರಿಂಜ, ಉಪಾಧ್ಯಕ್ಷರಾದ ಪ್ರಮೋದ್ ಸಾಲ್ಯಾನ್ ಮೋರ್ತಾಜೆ, ಕಾರ್ಯದರ್ಶಿ ಬಾಲಕೃಷ್ಣ, ಸದಸ್ಯರುಗಳಾದ ಪ್ರದೀಪ್ ಗೌಡ ನಾಗಜೆ, ಕೃಷ್ಣಪ್ಪ ಪೂಜಾರಿ ಬೊಂತ್ರಪಾಲು, ಉದಯ ಬಂಗೇರ ಬೋಲೋಟ್ಟು, ಮೋಹನ ತಿಮರಡ್ಡ, ನವೀನ್ ಪೂಜಾರಿ, ವಸಂತ ಗೌಡ, ಶ್ರೀಮತಿ ಸುಮಾ ಕಿರ್ನಡ್ಕ ಉಪಸ್ಥಿತರಿದ್ದರು.

Leave a Comment

error: Content is protected !!