23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

ನಾವೂರು : ಕಳೆದ 24 ವರ್ಷಗಳ ಹಿಂದೆ ನವೋದಯ ಯುವಕ ಮಂಡಲದ ಸದಸ್ಯರುಗಳ ಧಾರ್ಮಿಕ ಚಿಂತನೆಯೊಂದಿಗೆ ನಾವೂರು ಸರಕಾರಿ ಶಾಲೆಯಲ್ಲಿ ಪ್ರಾರಂಭಗೊಂಡಿದೆ.
ಪ್ರಸ್ತುತ ವರ್ಷದ ಕಾರ್ಯಕ್ರಮವು ಅ. 20ರ ಶುಕ್ರವಾರ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ ಶಾರದಾ ಪೂಜೆ ನಡೆಯಲಿದೆ.
ಇದರ ಆಮಂತ್ರಣ ಪತ್ರಿಕೆಯನ್ನು ಅ.8 ರಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗೌರವ ಸಲಹೆಗಾರರು, ಮಾರ್ಗದರ್ಶರಾದ ಡಾ. ಪ್ರದೀಪ್ ಆಟಿಕುಕ್ಕೆ ಬಿಡುಗಡೆ ಮಾಡಿ ಶುಭಹಾರೈಸಿದರು.


25ನೇ ವರ್ಷದ ಅಂಗವಾಗಿ ಡ್ಯಾಝಲ್ ಸ್ಟುಡಿಯೋ ಮೂಲ್ಕಿ ಅರ್ಪಿಸುವ ಮಯೋಡ್ ಮೆರೆಯಿನ ಸತ್ಯೋಲ್ನ ಕಥೆ “ಕಾರ್ಣಿಕದ ಗತ ವೈಭವ” ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಾಗ್ಮಿ, ಧಾರ್ಮಿಕ ಚಿಂತಕಿ ಅಕ್ಷಯ ಗೋಖಲೆ ಕಾರ್ಕಳ, ಇವರು ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಹರೀಶ್ ಕಾರಿಂಜ, ಉಪಾಧ್ಯಕ್ಷರಾದ ಪ್ರಮೋದ್ ಸಾಲ್ಯಾನ್ ಮೋರ್ತಾಜೆ, ಕಾರ್ಯದರ್ಶಿ ಬಾಲಕೃಷ್ಣ, ಸದಸ್ಯರುಗಳಾದ ಪ್ರದೀಪ್ ಗೌಡ ನಾಗಜೆ, ಕೃಷ್ಣಪ್ಪ ಪೂಜಾರಿ ಬೊಂತ್ರಪಾಲು, ಉದಯ ಬಂಗೇರ ಬೋಲೋಟ್ಟು, ಮೋಹನ ತಿಮರಡ್ಡ, ನವೀನ್ ಪೂಜಾರಿ, ವಸಂತ ಗೌಡ, ಶ್ರೀಮತಿ ಸುಮಾ ಕಿರ್ನಡ್ಕ ಉಪಸ್ಥಿತರಿದ್ದರು.

Related posts

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya
error: Content is protected !!